<p><strong>ಮೈಸೂರು</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಾ.ಡಿ.ಬಿ.ನಟೇಶ್ ಅವರನ್ನು ಶನಿವಾರ ಎತ್ತಂಗಡಿ ಮಾಡಿದ್ದ ರಾಜ್ಯ ಸರ್ಕಾರ, ಸೋಮವಾರ ಮತ್ತದೇ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.</p>.<p>ಒಂದು ದಿನದ ಅವಧಿಯಲ್ಲೇ ಎತ್ತಂಗಡಿ ಆದೇಶ ರದ್ದಾಗಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಆಯಾಮದ ಚರ್ಚೆಗೆ ಗ್ರಾಸವೊದಗಿಸಿದೆ.</p>.<p>ಬೆಂಗಳೂರಿನಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾದಿಂದ ₹ 422 ಕೋಟಿ ಮೊತ್ತದ ಕಾಮಗಾರಿ ಕೈಗೊಳ್ಳಲು ಅನುಮೋದನೆ ಸಿಕ್ಕ ಬೆನ್ನಿಗೆ, ನಟೇಶ್ ಎತ್ತಂಗಡಿ ಆದೇಶ ರದ್ದಾಗಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.</p>.<p>‘ಸರ್ಕಾರಿ ನಿಯಮಾವಳಿಯ ಪ್ರಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯನ್ನೇ ನೇಮಿಸಬೇಕು. ಈ ಹಿಂದಿನ ಬಾರಿ ನಟೇಶ್ ಅವರನ್ನು ಆಯುಕ್ತರನ್ನಾಗಿ ನೇಮಿಸುವಾಗಲೇ ಈ ಹುದ್ದೆಯ ಶ್ರೇಣಿಯನ್ನೇ ಕೆಳಗಿಳಿಸಿ; ಕಿರಿಯ ಕೆಎಎಸ್ ಅಧಿಕಾರಿಯ ಶ್ರೇಣಿಗೆ ನಿಗದಿಗೊಳಿಸಿ ವರ್ಗಾವಣೆ ಮಾಡಲಾಗಿತ್ತು’ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕುರುಬಾರಹಳ್ಳಿ ಸರ್ವೆ ನಂಬರ್ ನಾಲ್ಕರ ಭೂ ತಕರಾರಿಗೆ ಸಂಬಂಧಿಸಿದಂತೆ, ಮುಡಾ ಆಯುಕ್ತರಾಗಿದ್ದ ಡಾ.ಡಿ.ಬಿ.ನಟೇಶ್ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯಂತೆ ಸುಪ್ರೀಂಕೋರ್ಟ್ನಲ್ಲಿ ಪ್ರಾಧಿಕಾರದ ವಿರುದ್ಧವೇ ಪ್ರಕರಣ ನಡೆಸಲು ವಕೀಲರ ಶುಲ್ಕವಾಗಿ ₹ 24.05 ಲಕ್ಷ ಪಾವತಿಸಿದ್ದರು. ಇದಕ್ಕೆ ಎಲ್ಲೆಡೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದಲೇ ಎತ್ತಂಗಡಿಯಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.</p>.<p>ಆದರೆ ಇದೀಗ ಒಂದು ದಿನದ ಅಂತರದಲ್ಲಿ, ಹಿಂದಿನ ಆದೇಶ ರದ್ದುಗೊಳಿಸಿ ಮುಡಾ ಆಯುಕ್ತರನ್ನಾಗಿ ಮತ್ತೆ ನಟೇಶ್ ಅವರನ್ನೇ ರಾಜ್ಯ ಸರ್ಕಾರ ನೇಮಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ವ್ಯಕ್ತವಾಗಿದೆ. ಲಾಬಿಗೆ ಸರ್ಕಾರ ಮಣಿದಿದೆ ಎಂಬ ಆರೋಪವೂ ಕೇಳಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಡಾ.ಡಿ.ಬಿ.ನಟೇಶ್ ಅವರನ್ನು ಶನಿವಾರ ಎತ್ತಂಗಡಿ ಮಾಡಿದ್ದ ರಾಜ್ಯ ಸರ್ಕಾರ, ಸೋಮವಾರ ಮತ್ತದೇ ಹುದ್ದೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.</p>.<p>ಒಂದು ದಿನದ ಅವಧಿಯಲ್ಲೇ ಎತ್ತಂಗಡಿ ಆದೇಶ ರದ್ದಾಗಿರುವುದು ಸಾರ್ವಜನಿಕ ವಲಯದಲ್ಲಿ ಹಲವು ಆಯಾಮದ ಚರ್ಚೆಗೆ ಗ್ರಾಸವೊದಗಿಸಿದೆ.</p>.<p>ಬೆಂಗಳೂರಿನಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾದಿಂದ ₹ 422 ಕೋಟಿ ಮೊತ್ತದ ಕಾಮಗಾರಿ ಕೈಗೊಳ್ಳಲು ಅನುಮೋದನೆ ಸಿಕ್ಕ ಬೆನ್ನಿಗೆ, ನಟೇಶ್ ಎತ್ತಂಗಡಿ ಆದೇಶ ರದ್ದಾಗಿರುವುದು ಹಲವು ಅನುಮಾನಗಳನ್ನು ಸೃಷ್ಟಿಸಿದೆ.</p>.<p>‘ಸರ್ಕಾರಿ ನಿಯಮಾವಳಿಯ ಪ್ರಕಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಗೆ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಯನ್ನೇ ನೇಮಿಸಬೇಕು. ಈ ಹಿಂದಿನ ಬಾರಿ ನಟೇಶ್ ಅವರನ್ನು ಆಯುಕ್ತರನ್ನಾಗಿ ನೇಮಿಸುವಾಗಲೇ ಈ ಹುದ್ದೆಯ ಶ್ರೇಣಿಯನ್ನೇ ಕೆಳಗಿಳಿಸಿ; ಕಿರಿಯ ಕೆಎಎಸ್ ಅಧಿಕಾರಿಯ ಶ್ರೇಣಿಗೆ ನಿಗದಿಗೊಳಿಸಿ ವರ್ಗಾವಣೆ ಮಾಡಲಾಗಿತ್ತು’ ಎಂದು ಜಿಲ್ಲಾಡಳಿತದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕುರುಬಾರಹಳ್ಳಿ ಸರ್ವೆ ನಂಬರ್ ನಾಲ್ಕರ ಭೂ ತಕರಾರಿಗೆ ಸಂಬಂಧಿಸಿದಂತೆ, ಮುಡಾ ಆಯುಕ್ತರಾಗಿದ್ದ ಡಾ.ಡಿ.ಬಿ.ನಟೇಶ್ ಈ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯಂತೆ ಸುಪ್ರೀಂಕೋರ್ಟ್ನಲ್ಲಿ ಪ್ರಾಧಿಕಾರದ ವಿರುದ್ಧವೇ ಪ್ರಕರಣ ನಡೆಸಲು ವಕೀಲರ ಶುಲ್ಕವಾಗಿ ₹ 24.05 ಲಕ್ಷ ಪಾವತಿಸಿದ್ದರು. ಇದಕ್ಕೆ ಎಲ್ಲೆಡೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದಲೇ ಎತ್ತಂಗಡಿಯಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.</p>.<p>ಆದರೆ ಇದೀಗ ಒಂದು ದಿನದ ಅಂತರದಲ್ಲಿ, ಹಿಂದಿನ ಆದೇಶ ರದ್ದುಗೊಳಿಸಿ ಮುಡಾ ಆಯುಕ್ತರನ್ನಾಗಿ ಮತ್ತೆ ನಟೇಶ್ ಅವರನ್ನೇ ರಾಜ್ಯ ಸರ್ಕಾರ ನೇಮಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ವ್ಯಕ್ತವಾಗಿದೆ. ಲಾಬಿಗೆ ಸರ್ಕಾರ ಮಣಿದಿದೆ ಎಂಬ ಆರೋಪವೂ ಕೇಳಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>