<p><strong>ಮೈಸೂರು</strong>: ‘ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಹೇಳಿದರು. ತಕ್ಷಣವೇ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಮಂಗಳವಾರ ಇಲ್ಲಿ ತಿಳಿಸಿದರು.</p>.<p>ಚಾಮುಂಡೇಶ್ವರಿಯ ದರ್ಶನಕ್ಕಾಗಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂಸದರು ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿ, ‘ರಾಜೀನಾಮೆ ನೀಡಿದ್ದು ಸಂಘಟನೆಗೆ ಸಂಬಂಧಿಸಿದ ವಿಷಯ. ಕೆಲವು ಪ್ರಮುಖ ರಾಜ್ಯಗಳ ಚುನಾವಣೆಗಾಗಿ ಪಕ್ಷ ಸಜ್ಜುಗೊಳಿಸಲಿಕ್ಕಾಗಿಯೇ ರಾಷ್ಟ್ರೀಯ ಅಧ್ಯಕ್ಷರು ಈ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಹೇಳಿದರು.</p>.<p>‘ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೆದಿದೆ. ಹಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪ್ರಧಾನಿ ನರೇಂದ್ರ ಮೋದಿ ಜಾಗತಿಕವಾಗಿ ಬೆಳೆದಿದ್ದಾರೆ’ ಎಂದರು.</p>.<p>‘ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಸಿಕ್ಕಷ್ಟು ಅವಕಾಶ ರಾಜ್ಯದಲ್ಲಿ ಯಾರಿಗೂ ಸಿಕ್ಕಿಲ್ಲ. ನಾನೊಬ್ಬ ಸುಸಂಸ್ಕೃತ ರಾಜಕಾರಣಿ. ಅಧಿಕಾರ ಕೊಟ್ಟಾಗ ಎತ್ತರಕ್ಕೆ ಏರುವುದು, ಕೊಡದಿದ್ದಾಗ ಕುಸಿಯುವುದು ಒಳ್ಳೆಯದಲ್ಲ. ಎರಡನ್ನೂ ಸಮಾನ ಮನಸ್ಸಿನಲ್ಲಿ ಸ್ವೀಕರಿಸಿ ಮುಂದೆ ನಡೆಯಬೇಕು’ ಎಂದು ಸದಾನಂದಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ರಾಜಕೀಯದಲ್ಲಿ ಟೀಕೆ–ಟಿಪ್ಪಣಿ ಸಹಜ. ರಾಜಕೀಯ ದೊಡ್ಡ ಸಮುದ್ರ ಇದ್ದಂತೆ. ಸಮುದ್ರ ಸ್ನಾನಕ್ಕೆ ಇಳಿದವರು ಅಲೆಗಳಿಗೆ ಕಾಯಬಾರದು. ಎಲ್ಲದಕ್ಕೂ ನಮ್ಮ ಕೆಲಸ, ಬದ್ಧತೆಯ ಮೂಲಕವೇ ಉತ್ತರ ಕೊಡಬೇಕು’ ಎಂದು ಸಂಸದರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪಕ್ಷ ಸಂಘಟನೆಯ ದೃಷ್ಟಿಯಿಂದ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ರಾಜೀನಾಮೆ ನೀಡುವಂತೆ ಹೇಳಿದರು. ತಕ್ಷಣವೇ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಮಂಗಳವಾರ ಇಲ್ಲಿ ತಿಳಿಸಿದರು.</p>.<p>ಚಾಮುಂಡೇಶ್ವರಿಯ ದರ್ಶನಕ್ಕಾಗಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂಸದರು ತಮ್ಮನ್ನು ಭೇಟಿಯಾದ ಮಾಧ್ಯಮದವರೊಂದಿಗೆ ಮಾತನಾಡಿ, ‘ರಾಜೀನಾಮೆ ನೀಡಿದ್ದು ಸಂಘಟನೆಗೆ ಸಂಬಂಧಿಸಿದ ವಿಷಯ. ಕೆಲವು ಪ್ರಮುಖ ರಾಜ್ಯಗಳ ಚುನಾವಣೆಗಾಗಿ ಪಕ್ಷ ಸಜ್ಜುಗೊಳಿಸಲಿಕ್ಕಾಗಿಯೇ ರಾಷ್ಟ್ರೀಯ ಅಧ್ಯಕ್ಷರು ಈ ತೀರ್ಮಾನ ತೆಗೆದುಕೊಂಡಿದ್ದಾರೆ’ ಎಂದು ಹೇಳಿದರು.</p>.<p>‘ದೇಶದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೆದಿದೆ. ಹಲವು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪ್ರಧಾನಿ ನರೇಂದ್ರ ಮೋದಿ ಜಾಗತಿಕವಾಗಿ ಬೆಳೆದಿದ್ದಾರೆ’ ಎಂದರು.</p>.<p>‘ಬಿಜೆಪಿ ನನಗೆ ಎಲ್ಲವನ್ನೂ ಕೊಟ್ಟಿದೆ. ನನಗೆ ಸಿಕ್ಕಷ್ಟು ಅವಕಾಶ ರಾಜ್ಯದಲ್ಲಿ ಯಾರಿಗೂ ಸಿಕ್ಕಿಲ್ಲ. ನಾನೊಬ್ಬ ಸುಸಂಸ್ಕೃತ ರಾಜಕಾರಣಿ. ಅಧಿಕಾರ ಕೊಟ್ಟಾಗ ಎತ್ತರಕ್ಕೆ ಏರುವುದು, ಕೊಡದಿದ್ದಾಗ ಕುಸಿಯುವುದು ಒಳ್ಳೆಯದಲ್ಲ. ಎರಡನ್ನೂ ಸಮಾನ ಮನಸ್ಸಿನಲ್ಲಿ ಸ್ವೀಕರಿಸಿ ಮುಂದೆ ನಡೆಯಬೇಕು’ ಎಂದು ಸದಾನಂದಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ರಾಜಕೀಯದಲ್ಲಿ ಟೀಕೆ–ಟಿಪ್ಪಣಿ ಸಹಜ. ರಾಜಕೀಯ ದೊಡ್ಡ ಸಮುದ್ರ ಇದ್ದಂತೆ. ಸಮುದ್ರ ಸ್ನಾನಕ್ಕೆ ಇಳಿದವರು ಅಲೆಗಳಿಗೆ ಕಾಯಬಾರದು. ಎಲ್ಲದಕ್ಕೂ ನಮ್ಮ ಕೆಲಸ, ಬದ್ಧತೆಯ ಮೂಲಕವೇ ಉತ್ತರ ಕೊಡಬೇಕು’ ಎಂದು ಸಂಸದರು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>