<p><strong>ಮೈಸೂರು: </strong>ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅನುಪಸ್ಥಿತಿಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಗಾದಿ ಗೌತಮ್ ಭಾನುವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.</p>.<p>ಸಂಜೆ 4 ಗಂಟೆಯ ಹೊತ್ತಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದ ಇವರನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಈ ವೇಳೆ ರೋಹಿಣಿ ಸಿಂಧೂರಿ ಗೈರಾಗಿದ್ದರು.</p>.<p>ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲ್ಲಿಗೆ ಜಿಲ್ಲಾಧಿಕಾರಿಯಾಗಿ ಬಂದಿದ್ದು ಅನಿರೀಕ್ಷಿತ, ಕೋವಿಡ್ ಪರಿಸ್ಥಿತಿಯಲ್ಲಿ ಇದು ದೊಡ್ಡ ಸವಾಲು. ಸರ್ಕಾರದ ಘನತೆಯನ್ನು ಎತ್ತಿ ಹಿಡಿಯುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತೇನೆ’ ಎಂದು ತಿಳಿಸಿದರು.</p>.<p>‘ಈ ನಿಟ್ಟಿನಲ್ಲಿ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ನಾಗರಿಕ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಯಾವುದೇ ಜಿಲ್ಲೆಯಾಗಿದ್ದರೂ, ಆಡಳಿತದಲ್ಲಿ ಕ್ಲಿಷ್ಟ ವಿಷಯ ಇರುತ್ತದೆ. ಮೈಸೂರು ಪಾರಂಪರಿಕ ಹಾಗೂ ದೊಡ್ಡ ನಗರವಾಗಿರುವುದರಿಂದ ಸ್ವಲ್ಪ ಹೆಚ್ಚು ಸಮಸ್ಯೆ ಇರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಪಾರದರ್ಶಕತೆ, ಜನಸ್ನೇಹಿ, ಉತ್ತರದಾಯಿತ್ವ ಹಾಗೂಸ್ವಚ್ಛ ಆಡಳಿತ ನನ್ನ ಗುರಿ. ಸದ್ಯದ ಮಟ್ಟಿಗೆ, ಕೋವಿಡ್ ನಿಯಂತ್ರಣವೇ ಮೊದಲ ಆದ್ಯತೆ. ಎಲ್ಲರ ಸಲಹೆಗಳನ್ನೂ ಮುಕ್ತಕಂಠದಿಂದ ಸ್ವಾಗತಿಸುತ್ತೇನೆ. ಹಾಗೆಂದು,ಒಂದೆರಡು ದಿನಗಳಲ್ಲಿ ದೊಡ್ಡ ಬದಲಾವಣೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.</p>.<p>ಹಿಂದಿನ ಜಿಲ್ಲಾಧಿಕಾರಿ, ಹಿಂದಿನ ಪಾಲಿಕೆ ಆಯುಕ್ತರು, ಹೀಗಿನ ಹೊಸ ಆಯುಕ್ತರು, ಹೆಚ್ಚುವರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೊಂದಿಗೆ ಈಗಾಗಲೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.</p>.<p>‘ನಾನೊಬ್ಬ ‘ಲೋಪ್ರೊಫೈಲ್’ ಅಧಿಕಾರಿ. ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ನನ್ನ ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ. ಈ ರೀತಿ ಮಾಡಿದರೆ ಎಲ್ಲರ ಬೆಂಬಲವೂ ದೊರೆಯುತ್ತದೆ. ಎಲ್ಲೆಡೆ ಎಲ್ಲರಿಂದ ಒಳ್ಳೆಯ ಸಹಕಾರ ಸಿಕ್ಕಿದೆ’ ಎಂದು ತಿಳಿಸಿದರು.</p>.<p>ಹಿಂದೆ ಇಲ್ಲಿ ಜಿಲ್ಲಾಧಿಕಾರಿಯಾಗಿದ್ದ ಅಭಿರಾಂ ಜಿ ಶಂಕರ್ ಅವರನ್ನು ಒಮ್ಮೆ ಇಲ್ಲಿ ಭೇಟಿಯಾಗಿದ್ದೆ. ಆಡಳಿತ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದೆ ಎಂದು ನೆನಪಿಸಿಕೊಂಡರು.</p>.<p>2009ರ ಐಎಎಸ್ ಬ್ಯಾಚ್ ಆಗಿರುವ ಬಗಾದಿ ಗೌತಮ್, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/district/chamarajanagara/did-rohini-sindhuri-block-supply-of-medical-oxygen-chamarajanagara-audio-viral-836530.html" target="_blank">ಚಾಮರಾಜನಗರ ಜಿಲ್ಲೆಗೆ ಆಮ್ಲಜನಕ ಪೂರೈಕೆ ತಡೆದರೇ ರೋಹಿಣಿ ಸಿಂಧೂರಿ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವರ್ಗಾವಣೆಗೊಂಡಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅನುಪಸ್ಥಿತಿಯಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ಬಗಾದಿ ಗೌತಮ್ ಭಾನುವಾರ ಇಲ್ಲಿ ಅಧಿಕಾರ ಸ್ವೀಕರಿಸಿದರು.</p>.<p>ಸಂಜೆ 4 ಗಂಟೆಯ ಹೊತ್ತಿಗೆ ಜಿಲ್ಲಾಧಿಕಾರಿ ಕಚೇರಿಗೆ ಬಂದ ಇವರನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಈ ವೇಳೆ ರೋಹಿಣಿ ಸಿಂಧೂರಿ ಗೈರಾಗಿದ್ದರು.</p>.<p>ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಲ್ಲಿಗೆ ಜಿಲ್ಲಾಧಿಕಾರಿಯಾಗಿ ಬಂದಿದ್ದು ಅನಿರೀಕ್ಷಿತ, ಕೋವಿಡ್ ಪರಿಸ್ಥಿತಿಯಲ್ಲಿ ಇದು ದೊಡ್ಡ ಸವಾಲು. ಸರ್ಕಾರದ ಘನತೆಯನ್ನು ಎತ್ತಿ ಹಿಡಿಯುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತೇನೆ’ ಎಂದು ತಿಳಿಸಿದರು.</p>.<p>‘ಈ ನಿಟ್ಟಿನಲ್ಲಿ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ನಾಗರಿಕ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಯಾವುದೇ ಜಿಲ್ಲೆಯಾಗಿದ್ದರೂ, ಆಡಳಿತದಲ್ಲಿ ಕ್ಲಿಷ್ಟ ವಿಷಯ ಇರುತ್ತದೆ. ಮೈಸೂರು ಪಾರಂಪರಿಕ ಹಾಗೂ ದೊಡ್ಡ ನಗರವಾಗಿರುವುದರಿಂದ ಸ್ವಲ್ಪ ಹೆಚ್ಚು ಸಮಸ್ಯೆ ಇರಬಹುದು ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>ಪಾರದರ್ಶಕತೆ, ಜನಸ್ನೇಹಿ, ಉತ್ತರದಾಯಿತ್ವ ಹಾಗೂಸ್ವಚ್ಛ ಆಡಳಿತ ನನ್ನ ಗುರಿ. ಸದ್ಯದ ಮಟ್ಟಿಗೆ, ಕೋವಿಡ್ ನಿಯಂತ್ರಣವೇ ಮೊದಲ ಆದ್ಯತೆ. ಎಲ್ಲರ ಸಲಹೆಗಳನ್ನೂ ಮುಕ್ತಕಂಠದಿಂದ ಸ್ವಾಗತಿಸುತ್ತೇನೆ. ಹಾಗೆಂದು,ಒಂದೆರಡು ದಿನಗಳಲ್ಲಿ ದೊಡ್ಡ ಬದಲಾವಣೆಯಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದರು.</p>.<p>ಹಿಂದಿನ ಜಿಲ್ಲಾಧಿಕಾರಿ, ಹಿಂದಿನ ಪಾಲಿಕೆ ಆಯುಕ್ತರು, ಹೀಗಿನ ಹೊಸ ಆಯುಕ್ತರು, ಹೆಚ್ಚುವರಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯೊಂದಿಗೆ ಈಗಾಗಲೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.</p>.<p>‘ನಾನೊಬ್ಬ ‘ಲೋಪ್ರೊಫೈಲ್’ ಅಧಿಕಾರಿ. ಪ್ರಾಮಾಣಿಕತೆಯಿಂದ ಪಾರದರ್ಶಕವಾಗಿ ನನ್ನ ಕೆಲಸವನ್ನು ಮಾಡಿಕೊಂಡು ಹೋಗುತ್ತೇನೆ. ಈ ರೀತಿ ಮಾಡಿದರೆ ಎಲ್ಲರ ಬೆಂಬಲವೂ ದೊರೆಯುತ್ತದೆ. ಎಲ್ಲೆಡೆ ಎಲ್ಲರಿಂದ ಒಳ್ಳೆಯ ಸಹಕಾರ ಸಿಕ್ಕಿದೆ’ ಎಂದು ತಿಳಿಸಿದರು.</p>.<p>ಹಿಂದೆ ಇಲ್ಲಿ ಜಿಲ್ಲಾಧಿಕಾರಿಯಾಗಿದ್ದ ಅಭಿರಾಂ ಜಿ ಶಂಕರ್ ಅವರನ್ನು ಒಮ್ಮೆ ಇಲ್ಲಿ ಭೇಟಿಯಾಗಿದ್ದೆ. ಆಡಳಿತ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದೆ ಎಂದು ನೆನಪಿಸಿಕೊಂಡರು.</p>.<p>2009ರ ಐಎಎಸ್ ಬ್ಯಾಚ್ ಆಗಿರುವ ಬಗಾದಿ ಗೌತಮ್, ರಾಯಚೂರು, ಚಿಕ್ಕಮಗಳೂರು, ದಾವಣಗೆರೆ ಜಿಲ್ಲಾಧಿಕಾರಿಯಾಗಿ, ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ಯನಿರ್ವಹಿಸಿದ್ದರು.</p>.<p><strong>ಇದನ್ನೂ ಓದಿ... <a href="https://www.prajavani.net/district/chamarajanagara/did-rohini-sindhuri-block-supply-of-medical-oxygen-chamarajanagara-audio-viral-836530.html" target="_blank">ಚಾಮರಾಜನಗರ ಜಿಲ್ಲೆಗೆ ಆಮ್ಲಜನಕ ಪೂರೈಕೆ ತಡೆದರೇ ರೋಹಿಣಿ ಸಿಂಧೂರಿ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>