ಇವರು ಬೆಳವಾಡಿ ಕೈಗಾರಿಕಾ ಪ್ರದೇಶದಲ್ಲಿರುವ ತಮ್ಮ ಕಾರ್ಖಾನೆಯಿಂದ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸಕ್ಕೆ ತೆರಳುವ ಸಂದರ್ಭದಲ್ಲಿ ಬೋಗಾದಿ ರಿಂಗ್ರಸ್ತೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕಾರು ಪಕ್ಕಕ್ಕೆ ನಿಲ್ಲಿಸಿ ಎದೆ ನೋವಿನಿಂದ ಒದ್ದಾಡುತ್ತಿದ್ದ ಇವರನ್ನು ಸಾರ್ವಜನಿಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅಷ್ಟೊತ್ತಿಗೆ ಇವರು ಮೃತಪಟ್ಟಿದ್ದರು.