ಮೈಸೂರು: ನಗರದಲ್ಲಿ ಚಿರತೆಗಳು ಅಲೆಯುತ್ತಿವೆ ಎಂಬ ವದಂತಿಯನ್ನು ನಂಬಬಾರದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
‘ಜೆ.ಪಿ.ನಗರದ ಸಮೀಪ ಸೇತುವೆಯೊಂದರ ಮೇಲೆ ಚಿರತೆಯೊಂದು ನಡೆದಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಹರಿದಾಡುತ್ತಿದ್ದು, ಇದು ಮೈಸೂರಿನ ವಿಡಿಯೊ ಅಲ್ಲ’ ಎಂದು ಡಿಸಿಎಫ್ ಪ್ರಶಾಂತ್ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
‘ಇಲ್ಲಿನ ಬೆಮಲ್ ಆವರಣದಲ್ಲಿ ಇರಿಸಿದ್ದ ಬೋನಿಗೆ ಒಂದೂವರೆ ವರ್ಷದ ಹೆಣ್ಣು ಚಿರತೆಯು ಶುಕ್ರವಾರ ಬಿದ್ದಿದೆ. ಇದನ್ನು ಬಿಟ್ಟರೆ ಜೆ.ಪಿ.ನಗರದಲ್ಲಿ ಚಿರತೆ ಕಾಣಿಸಿರುವ ಮಾಹಿತಿ ಲಭಿಸಿಲ್ಲ’ ಎಂದು ವಲಯ ಕಚೇರಿಯ ಅಧಿಕಾರಿಗಳು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.