‘ಕೆಎಆರ್ಪಿ ಮೌಂಟೆಡ್ ಘಟಕದ ಸನಿಹದಲ್ಲೇ ಮೈಸೂರು ನಗರ ಪೊಲೀಸ್ ಕಮೀಷನರೇಟ್ ಘಟಕ ಹಾಗೂ ಜಿಲ್ಲಾ ಪೊಲೀಸ್ ಘಟಕದ ಶ್ವಾನ ದಳಗಳಿದ್ದು, ತುರ್ತು ಸಂದರ್ಭದಲ್ಲಿ ಪಶುವೈದ್ಯ ಸೇವೆ ಬೇಕಿದೆ. ಆದ್ದರಿಂದ ಇಲ್ಲಿರುವ ಪಶುವೈದ್ಯ ಆಸ್ಪತ್ರೆಯನ್ನು ಬೇರೆಡೆಗೆ ಸ್ಥಳಾಂತರ ಮಾಡದೇ, ಇಲ್ಲಿಯೇ ಮುಂದುವರೆಸುವಂತೆ ಸರ್ಕಾರಕ್ಕೆ ಪ್ರಸ್ತಾವಿಸಿ’ ಎಂದು ಪೊಲೀಸ್ ಆಯುಕ್ತರು ತಮ್ಮ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.