<p><strong>ಮೈಸೂರು: </strong>ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಫೆ.16ರಂದು ನಡೆಯಲಿರುವ ವಿಚಾರ ಸಂಕಿರಣದ ಗೋಷ್ಠಿಯೊಂದರ ಅಧ್ಯಕ್ಷತೆ ವಹಿಸಲ್ಲ ಎಂದು ಸಮಾಜವಾದಿ ಪ.ಮಲ್ಲೇಶ್ ತಿಳಿಸಿದ್ದಾರೆ.</p>.<p>ನಾಟಕೋತ್ಸವಕ್ಕೆ ಚಾಲನೆ ಸಿಕ್ಕ ಶುಕ್ರವಾರವೇ ಮಲ್ಲೇಶ್, ರಂಗಾಯಣದ ನಿರ್ದೇಶಕರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದು, ಭಾಗವಹಿಸದಿರುವ ಕಾರಣವನ್ನು ಅದರಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಗಾಂಧಿ ಪಥದ ಮೊದಲ ಗೋಷ್ಠಿಯ ಅಧ್ಯಕ್ಷ ಸ್ಥಾನ ವಹಿಸಲು ಒಪ್ಪಿದೆ. ಒಪ್ಪಿದ ಮೇಲೆ ಬರಬೇಕು. ಆದರೆ ಬರುತ್ತಿಲ್ಲ. ಕಾರಣ, ನೀವೊಬ್ಬರು ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹೆಣ್ಣು ಮಗಳೊಬ್ಬಳನ್ನು ನಿರ್ದೇಶಕರಾಗಿ ಮುಂದುವರೆಸಲಿಲ್ಲ ಈ ಸರ್ಕಾರ. ಇದು ರಾಜಕೀಯ. ಇದಕ್ಕೆ ಮೌನಸಮ್ಮತಿ ಕೊಡುತ್ತಿರುವವರು ‘ಸಮುದಾಯ’ದವರು.</p>.<p>ಆದರೆ, ಗಾಂಧಿ ಪಥದ ಹೆಸರಿನಲ್ಲಿ ನೀವು ರಾಜಕೀಯ ಮಾಡಬೇಕಾಗಿರಲಿಲ್ಲ. ಈ ಸಂದರ್ಭದಲ್ಲಿ ಟಿಪ್ಪುವಿನ ವಿಷಯ ಪ್ರಸ್ತಾಪಿಸಿದ್ದು ಸುತರಾಂ ತಪ್ಪು. ಹೇಳಿ ಕೇಳಿ ಟಿಪ್ಪು ರಾಜಕೀಯ ಗಾಳಕ್ಕೆ ಸಿಕ್ಕಿಕೊಂಡಿದ್ದಾನೆ. ಗಾಂಧಿಪಥದ ಹೆಸರಿನಲ್ಲಿ ನೀವು ಗಾಂಧಿ ಮತ್ತು ಗೋಡ್ಸೆಯನ್ನು ತರುತ್ತೀರ? ನಿಮಗೆ ಪ್ರಜ್ಞೆ ಇರಬೇಕಿತ್ತು. ರಾಜ್ಯ ಸರ್ಕಾರ ಟಿಪ್ಪುವನ್ನು ಪಠ್ಯಪುಸ್ತಕದಿಂದಲೇ ಕಿತ್ತೊಗೆಯುವ ಹುನ್ನಾರದಲ್ಲಿದೆ. ಈ ಮಂತ್ರಿವರೇಣ್ಯನಿಗೆ ಡಾ.ಚಿದಾನಂದಮೂರ್ತಿ ಬದುಕಿರಬೇಕಿತ್ತು.</p>.<p>ಇನ್ನು, ‘ಜನ್ನಿ, ನನ್ನ ಗೆಳೆಯ, ಕುಡುಕ. ಆದರೆ, ಗಾಂಧೀಜಿ ಕುಡುಕರಲ್ಲ’ ಎಂಬ ನಿಮ್ಮ ನುಡಿಮುತ್ತು. ಮಾನ್ಯರೆ, ರಂಗಾಯಣ ಕಟ್ಟಿದ ಕಲಾತಪಸ್ವಿ ಬಿ.ವಿ.ಕಾರಂತ್ ಎಂತಹ ಕುಡುಕ. ನಿಮ್ಮ ಸುತ್ತಮುತ್ತ ಇರುವವರು ಯಾವ ಗುಂಪಿನ ಕುಡುಕರು. ಬಿ.ವಿ.ಕಾರಂತರು ಗಾಂಧಿಯನ್ನು ಕುಡಿದಿದ್ದರು, ನೆನಪಿರಲಿ.</p>.<p>ಮೈಸೂರಿನ ರಂಗಾಯಣಕ್ಕೆ ಸಾಕಷ್ಟು ನಿರ್ದೇಶಕರು ಆಗಿದ್ದಾರೆ. ಅದಕ್ಕೊಂದು ಚರಿತ್ರೆಯಿದೆ. ಇದುವರೆವಿಗೂ ಯಾವೊಬ್ಬ ಹಾಲಿ ನಿರ್ದೇಶಕ ಮತ್ತೊಬ್ಬ ಮಾಜಿ ನಿರ್ದೇಶಕರ ಬಗ್ಗೆ ಇಷ್ಟೊಂದು ಕ್ಷುಲ್ಲಕವಾಗಿ ಮಾತನಾಡಿರಲಿಲ್ಲ. ಮಾನ್ಯರೆ, ನಿಮ್ಮ ನಾಲಗೆ ನಿಮ್ಮ ಕುಲ ಯಾವುದು ಎಂದು ಪ್ರಚಾರ ಮಾಡಿಬಿಟ್ಟಿತು. ಈ ಕಾರಣಗಳಿಂದಾಗಿ ನಾನು ಸಭೆಗೆ ಗೈರುಹಾಜರಾಗುತ್ತಿದ್ದೇನೆ’ ಎಂಬ ಒಕ್ಕಣೆ ಪತ್ರದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದಲ್ಲಿ ಫೆ.16ರಂದು ನಡೆಯಲಿರುವ ವಿಚಾರ ಸಂಕಿರಣದ ಗೋಷ್ಠಿಯೊಂದರ ಅಧ್ಯಕ್ಷತೆ ವಹಿಸಲ್ಲ ಎಂದು ಸಮಾಜವಾದಿ ಪ.ಮಲ್ಲೇಶ್ ತಿಳಿಸಿದ್ದಾರೆ.</p>.<p>ನಾಟಕೋತ್ಸವಕ್ಕೆ ಚಾಲನೆ ಸಿಕ್ಕ ಶುಕ್ರವಾರವೇ ಮಲ್ಲೇಶ್, ರಂಗಾಯಣದ ನಿರ್ದೇಶಕರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದು, ಭಾಗವಹಿಸದಿರುವ ಕಾರಣವನ್ನು ಅದರಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಗಾಂಧಿ ಪಥದ ಮೊದಲ ಗೋಷ್ಠಿಯ ಅಧ್ಯಕ್ಷ ಸ್ಥಾನ ವಹಿಸಲು ಒಪ್ಪಿದೆ. ಒಪ್ಪಿದ ಮೇಲೆ ಬರಬೇಕು. ಆದರೆ ಬರುತ್ತಿಲ್ಲ. ಕಾರಣ, ನೀವೊಬ್ಬರು ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಹೆಣ್ಣು ಮಗಳೊಬ್ಬಳನ್ನು ನಿರ್ದೇಶಕರಾಗಿ ಮುಂದುವರೆಸಲಿಲ್ಲ ಈ ಸರ್ಕಾರ. ಇದು ರಾಜಕೀಯ. ಇದಕ್ಕೆ ಮೌನಸಮ್ಮತಿ ಕೊಡುತ್ತಿರುವವರು ‘ಸಮುದಾಯ’ದವರು.</p>.<p>ಆದರೆ, ಗಾಂಧಿ ಪಥದ ಹೆಸರಿನಲ್ಲಿ ನೀವು ರಾಜಕೀಯ ಮಾಡಬೇಕಾಗಿರಲಿಲ್ಲ. ಈ ಸಂದರ್ಭದಲ್ಲಿ ಟಿಪ್ಪುವಿನ ವಿಷಯ ಪ್ರಸ್ತಾಪಿಸಿದ್ದು ಸುತರಾಂ ತಪ್ಪು. ಹೇಳಿ ಕೇಳಿ ಟಿಪ್ಪು ರಾಜಕೀಯ ಗಾಳಕ್ಕೆ ಸಿಕ್ಕಿಕೊಂಡಿದ್ದಾನೆ. ಗಾಂಧಿಪಥದ ಹೆಸರಿನಲ್ಲಿ ನೀವು ಗಾಂಧಿ ಮತ್ತು ಗೋಡ್ಸೆಯನ್ನು ತರುತ್ತೀರ? ನಿಮಗೆ ಪ್ರಜ್ಞೆ ಇರಬೇಕಿತ್ತು. ರಾಜ್ಯ ಸರ್ಕಾರ ಟಿಪ್ಪುವನ್ನು ಪಠ್ಯಪುಸ್ತಕದಿಂದಲೇ ಕಿತ್ತೊಗೆಯುವ ಹುನ್ನಾರದಲ್ಲಿದೆ. ಈ ಮಂತ್ರಿವರೇಣ್ಯನಿಗೆ ಡಾ.ಚಿದಾನಂದಮೂರ್ತಿ ಬದುಕಿರಬೇಕಿತ್ತು.</p>.<p>ಇನ್ನು, ‘ಜನ್ನಿ, ನನ್ನ ಗೆಳೆಯ, ಕುಡುಕ. ಆದರೆ, ಗಾಂಧೀಜಿ ಕುಡುಕರಲ್ಲ’ ಎಂಬ ನಿಮ್ಮ ನುಡಿಮುತ್ತು. ಮಾನ್ಯರೆ, ರಂಗಾಯಣ ಕಟ್ಟಿದ ಕಲಾತಪಸ್ವಿ ಬಿ.ವಿ.ಕಾರಂತ್ ಎಂತಹ ಕುಡುಕ. ನಿಮ್ಮ ಸುತ್ತಮುತ್ತ ಇರುವವರು ಯಾವ ಗುಂಪಿನ ಕುಡುಕರು. ಬಿ.ವಿ.ಕಾರಂತರು ಗಾಂಧಿಯನ್ನು ಕುಡಿದಿದ್ದರು, ನೆನಪಿರಲಿ.</p>.<p>ಮೈಸೂರಿನ ರಂಗಾಯಣಕ್ಕೆ ಸಾಕಷ್ಟು ನಿರ್ದೇಶಕರು ಆಗಿದ್ದಾರೆ. ಅದಕ್ಕೊಂದು ಚರಿತ್ರೆಯಿದೆ. ಇದುವರೆವಿಗೂ ಯಾವೊಬ್ಬ ಹಾಲಿ ನಿರ್ದೇಶಕ ಮತ್ತೊಬ್ಬ ಮಾಜಿ ನಿರ್ದೇಶಕರ ಬಗ್ಗೆ ಇಷ್ಟೊಂದು ಕ್ಷುಲ್ಲಕವಾಗಿ ಮಾತನಾಡಿರಲಿಲ್ಲ. ಮಾನ್ಯರೆ, ನಿಮ್ಮ ನಾಲಗೆ ನಿಮ್ಮ ಕುಲ ಯಾವುದು ಎಂದು ಪ್ರಚಾರ ಮಾಡಿಬಿಟ್ಟಿತು. ಈ ಕಾರಣಗಳಿಂದಾಗಿ ನಾನು ಸಭೆಗೆ ಗೈರುಹಾಜರಾಗುತ್ತಿದ್ದೇನೆ’ ಎಂಬ ಒಕ್ಕಣೆ ಪತ್ರದಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>