<p><strong>ಮೈಸೂರು: </strong>‘ಕಲೆ–ಸಂಗೀತದಿಂದ ಸಂಸ್ಕಾರ ಸಿಗಲಿದೆ’ ಎಂದು ಸುತ್ತೂರಿನ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.</p>.<p>ನೃತ್ಯಾಲಯ ಟ್ರಸ್ಟ್ ಪ್ರದರ್ಶಕ ಕಲೆಗಳ ಅಕಾಡೆಮಿ ಶುಕ್ರವಾರ ರಾತ್ರಿ ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಿದ್ದ ‘40ರ ನಲಿವು–ನಿತ್ಯ ನರ್ತನ ಪರ್ವ’ಕ್ಕೆ ಚಾಲನೆ ನೀಡಿದ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>‘ಸಂಸ್ಕಾರ ಕಲಿತ ವಿದ್ಯಾರ್ಥಿ, ತನ್ನ ಕುಟುಂಬದ ಸಂಸ್ಕಾರವನ್ನು ಉತ್ತಮಗೊಳಿಸುತ್ತಾನೆ. ಇದರ ಜತೆಗೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿಯೂ ರೂಪುಗೊಳ್ಳುತ್ತಾನೆ. ಇದಕ್ಕೆ ಕಲಾವಿದೆ ತುಳಸಿ ರಾಮಚಂದ್ರ ಕುಟುಂಬವೇ ನೈಜ ಸಾಕ್ಷಿಯಾಗಿದೆ’ ಎಂದರು.</p>.<p>‘ಕಲೆ–ಸಂಗೀತದ ವಾತಾವರಣದಲ್ಲಿ ಬೆಳೆಯುವ ಮಕ್ಕಳು ತಾವಿದ್ದೆಡೆ ಸಂಸ್ಕಾರದ ಬಳ್ಳಿಯನ್ನು ಹಬ್ಬಿಸುತ್ತಾರೆ. ಇದಕ್ಕೆ ನೃತ್ಯಾಲಯ ಟ್ರಸ್ಟ್ ಸಾಕ್ಷಿಯಾಗಿದೆ. ತಮ್ಮ ಮನೆಯ ಸಂಸ್ಕಾರವನ್ನು ತುಳಸಿ ರಾಮಚಂದ್ರ ನೃತ್ಯಾಲಯದ ವಿದ್ಯಾರ್ಥಿಗಳಿಗೂ ಪಸರಿಸಿದ್ದಾರೆ’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.</p>.<p>ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮಾತನಾಡಿ, ‘ಮಹಾರಾಜರ ಕಾಲದಿಂದಲೂ ಮೈಸೂರು ಕಲೆ, ಸಾಹಿತ್ಯ, ಸಂಗೀತ, ನೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ಇದರಿಂದಾಗಿ ವಿಶಿಷ್ಟ ಸ್ಥಾನಮಾನವನ್ನು ಗಳಿಸಿಕೊಂಡಿದೆ. ಈ ಪರಂಪರೆಯನ್ನು ಇಂದಿಗೂ ಜೆಎಸ್ಎಸ್, ವಿಶ್ವವಿದ್ಯಾಲಯ, ನೃತ್ಯಾಲಯಗಳು ಚಾಚೂ ತಪ್ಪದೇ ಅನೂಚಾನಾಗಿ ಮುಂದುವರೆಸಿಕೊಂಡು ಬರುತ್ತಿವೆ’ ಎಂದು ಹೇಳಿದರು.</p>.<p>ಡಾ.ತುಳಸಿ ರಾಮಚಂದ್ರ ಮಾರ್ಗದರ್ಶನದಲ್ಲಿ ನೃತ್ಯಾಲಯದ ವಿದ್ಯಾರ್ಥಿ ಸಮೂಹ ತಮ್ಮ ಪ್ರತಿಭೆ ಪ್ರದರ್ಶಿಸಿತು. ಕಲಾ ಪೋಷಕ ಕೆ.ವಿ.ಮೂರ್ತಿ ಉಪಸ್ಥಿತರಿದ್ದರು. ಕಲಾಸಕ್ತರು ನೃತ್ಯದ ಸೊಬಗನ್ನು ಕಣ್ತುಂಬಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಕಲೆ–ಸಂಗೀತದಿಂದ ಸಂಸ್ಕಾರ ಸಿಗಲಿದೆ’ ಎಂದು ಸುತ್ತೂರಿನ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.</p>.<p>ನೃತ್ಯಾಲಯ ಟ್ರಸ್ಟ್ ಪ್ರದರ್ಶಕ ಕಲೆಗಳ ಅಕಾಡೆಮಿ ಶುಕ್ರವಾರ ರಾತ್ರಿ ನಗರದ ಜಗನ್ಮೋಹನ ಅರಮನೆ ಸಭಾಂಗಣದಲ್ಲಿ ಆಯೋಜಿಸಿದ್ದ ‘40ರ ನಲಿವು–ನಿತ್ಯ ನರ್ತನ ಪರ್ವ’ಕ್ಕೆ ಚಾಲನೆ ನೀಡಿದ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>‘ಸಂಸ್ಕಾರ ಕಲಿತ ವಿದ್ಯಾರ್ಥಿ, ತನ್ನ ಕುಟುಂಬದ ಸಂಸ್ಕಾರವನ್ನು ಉತ್ತಮಗೊಳಿಸುತ್ತಾನೆ. ಇದರ ಜತೆಗೆ ಸಮಾಜದಲ್ಲಿ ಉತ್ತಮ ಪ್ರಜೆಯಾಗಿಯೂ ರೂಪುಗೊಳ್ಳುತ್ತಾನೆ. ಇದಕ್ಕೆ ಕಲಾವಿದೆ ತುಳಸಿ ರಾಮಚಂದ್ರ ಕುಟುಂಬವೇ ನೈಜ ಸಾಕ್ಷಿಯಾಗಿದೆ’ ಎಂದರು.</p>.<p>‘ಕಲೆ–ಸಂಗೀತದ ವಾತಾವರಣದಲ್ಲಿ ಬೆಳೆಯುವ ಮಕ್ಕಳು ತಾವಿದ್ದೆಡೆ ಸಂಸ್ಕಾರದ ಬಳ್ಳಿಯನ್ನು ಹಬ್ಬಿಸುತ್ತಾರೆ. ಇದಕ್ಕೆ ನೃತ್ಯಾಲಯ ಟ್ರಸ್ಟ್ ಸಾಕ್ಷಿಯಾಗಿದೆ. ತಮ್ಮ ಮನೆಯ ಸಂಸ್ಕಾರವನ್ನು ತುಳಸಿ ರಾಮಚಂದ್ರ ನೃತ್ಯಾಲಯದ ವಿದ್ಯಾರ್ಥಿಗಳಿಗೂ ಪಸರಿಸಿದ್ದಾರೆ’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.</p>.<p>ಬಿಜೆಪಿ ಮುಖಂಡ ಎಚ್.ವಿ.ರಾಜೀವ್ ಮಾತನಾಡಿ, ‘ಮಹಾರಾಜರ ಕಾಲದಿಂದಲೂ ಮೈಸೂರು ಕಲೆ, ಸಾಹಿತ್ಯ, ಸಂಗೀತ, ನೃತ್ಯಕ್ಕೆ ಪ್ರೋತ್ಸಾಹ ನೀಡುತ್ತಿದೆ. ಇದರಿಂದಾಗಿ ವಿಶಿಷ್ಟ ಸ್ಥಾನಮಾನವನ್ನು ಗಳಿಸಿಕೊಂಡಿದೆ. ಈ ಪರಂಪರೆಯನ್ನು ಇಂದಿಗೂ ಜೆಎಸ್ಎಸ್, ವಿಶ್ವವಿದ್ಯಾಲಯ, ನೃತ್ಯಾಲಯಗಳು ಚಾಚೂ ತಪ್ಪದೇ ಅನೂಚಾನಾಗಿ ಮುಂದುವರೆಸಿಕೊಂಡು ಬರುತ್ತಿವೆ’ ಎಂದು ಹೇಳಿದರು.</p>.<p>ಡಾ.ತುಳಸಿ ರಾಮಚಂದ್ರ ಮಾರ್ಗದರ್ಶನದಲ್ಲಿ ನೃತ್ಯಾಲಯದ ವಿದ್ಯಾರ್ಥಿ ಸಮೂಹ ತಮ್ಮ ಪ್ರತಿಭೆ ಪ್ರದರ್ಶಿಸಿತು. ಕಲಾ ಪೋಷಕ ಕೆ.ವಿ.ಮೂರ್ತಿ ಉಪಸ್ಥಿತರಿದ್ದರು. ಕಲಾಸಕ್ತರು ನೃತ್ಯದ ಸೊಬಗನ್ನು ಕಣ್ತುಂಬಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>