<p><strong>ಮೈಸೂರು:</strong> ರಾಮಕೃಷ್ಣ ಆಶ್ರಮ ಹಾಗೂ ವೀರಶೈವ ಲಿಂಗಾಯತ ಸಂಘಟನೆಗಳ ನಡುವಿನ ವಿವಾದ ಸೋಮವಾರ ಪೊಲೀಸ್ ಠಾಣೆಯ ಮೆಟ್ಟಿಲೇರಿತು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟದ ಸದಸ್ಯರು ಇಲ್ಲಿನ ದೇವರಾಜ ಠಾಣೆಗೆ ಸೋಮವಾರ ದೂರು ನೀಡಿದ್ದಾರೆ.</p>.<p>ಪಾರಂಪರಿಕ ಕಟ್ಟಡದಲ್ಲಿದ್ದ ದಕ್ಷಿಣೇಶ್ವರ ಮೂರ್ತಿಯನ್ನು ಅನುಮತಿ ಇಲ್ಲದೇ ವಿರೂಪಗೊಳಿಸುವ ಮೂಲಕ ವೀರಶೈವ ಸಮಾಜದವರ ಭಾವನೆಗಳಿಗೆ ಧಕ್ಕೆ ತರಲಾಗಿದ್ದು, ರಾಮಕೃಷ್ಣ ಆಶ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ಕುರಿತ ದಾಖಲಾತಿಗಳನ್ನು ಸಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.</p>.<p>ಪ್ರತಿಭಟನೆ ಮುಂದುವರಿಕೆ: ಎನ್ಟಿಎಂ ಐತಿಹಾಸಿಕ ಕನ್ನಡ ಶಾಲೆ ಉಳಿಸಿಕೊಂಡು, ಸ್ಮಾರಕ ನಿರ್ಮಿಸಿ ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಎನ್ಟಿಎಂ ಶಾಲೆಯ ಮುಂಭಾಗ ಮಹಾರಾಣಿ ಮಾದರಿ ಶಾಲೆ ಉಳಿಸಿ ಹೋರಾಟ ಒಕ್ಕೂಟದ ಸದಸ್ಯರೊಂದಿಗೆ ಸೇರಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಮಕೃಷ್ಣ ಆಶ್ರಮದ ಬಗ್ಗೆ ನಮಗೆ ಅಪಾರವಾದ ಅಭಿಮಾನವಿದೆ. ನಮ್ಮ ಹಿಂದೂ ಧರ್ಮ ಸಂಸ್ಕೃತಿ ಪರಂಪರೆಗಳನ್ನು ಉಳಿಸುವ ನಿಟ್ಟಿನಲ್ಲಿ ಆಶ್ರಮದ ಕೊಡುಗೆ ಅಪಾರ ಹಾಗೂ ಬಹಳಷ್ಟು ಬಡ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಹಾಗೆಯೇ ಈ ಶಾಲೆಯನ್ನೂ ಉಳಿಸಿಕೊಂಡು ಸ್ಮಾರಕ ನಿರ್ಮಿಸಲಿ’ ಎಂದು ಸೇನಾಪಡೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಒತ್ತಾಯಿಸಿದರು.</p>.<p>ಹೋರಾಟಗಾರರಾದ ಪ.ಮಲ್ಲೇಶ್, ಸ.ರ.ಸುದರ್ಶನ್, ಪುರುಷೋತ್ತಮ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಮಕೃಷ್ಣ ಆಶ್ರಮ ಹಾಗೂ ವೀರಶೈವ ಲಿಂಗಾಯತ ಸಂಘಟನೆಗಳ ನಡುವಿನ ವಿವಾದ ಸೋಮವಾರ ಪೊಲೀಸ್ ಠಾಣೆಯ ಮೆಟ್ಟಿಲೇರಿತು.</p>.<p>ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟದ ಸದಸ್ಯರು ಇಲ್ಲಿನ ದೇವರಾಜ ಠಾಣೆಗೆ ಸೋಮವಾರ ದೂರು ನೀಡಿದ್ದಾರೆ.</p>.<p>ಪಾರಂಪರಿಕ ಕಟ್ಟಡದಲ್ಲಿದ್ದ ದಕ್ಷಿಣೇಶ್ವರ ಮೂರ್ತಿಯನ್ನು ಅನುಮತಿ ಇಲ್ಲದೇ ವಿರೂಪಗೊಳಿಸುವ ಮೂಲಕ ವೀರಶೈವ ಸಮಾಜದವರ ಭಾವನೆಗಳಿಗೆ ಧಕ್ಕೆ ತರಲಾಗಿದ್ದು, ರಾಮಕೃಷ್ಣ ಆಶ್ರಮದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ. ಈ ಕುರಿತ ದಾಖಲಾತಿಗಳನ್ನು ಸಲ್ಲಿಸುವಂತೆ ಪೊಲೀಸರು ಸೂಚಿಸಿದ್ದಾರೆ.</p>.<p>ಪ್ರತಿಭಟನೆ ಮುಂದುವರಿಕೆ: ಎನ್ಟಿಎಂ ಐತಿಹಾಸಿಕ ಕನ್ನಡ ಶಾಲೆ ಉಳಿಸಿಕೊಂಡು, ಸ್ಮಾರಕ ನಿರ್ಮಿಸಿ ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಎನ್ಟಿಎಂ ಶಾಲೆಯ ಮುಂಭಾಗ ಮಹಾರಾಣಿ ಮಾದರಿ ಶಾಲೆ ಉಳಿಸಿ ಹೋರಾಟ ಒಕ್ಕೂಟದ ಸದಸ್ಯರೊಂದಿಗೆ ಸೇರಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಮಕೃಷ್ಣ ಆಶ್ರಮದ ಬಗ್ಗೆ ನಮಗೆ ಅಪಾರವಾದ ಅಭಿಮಾನವಿದೆ. ನಮ್ಮ ಹಿಂದೂ ಧರ್ಮ ಸಂಸ್ಕೃತಿ ಪರಂಪರೆಗಳನ್ನು ಉಳಿಸುವ ನಿಟ್ಟಿನಲ್ಲಿ ಆಶ್ರಮದ ಕೊಡುಗೆ ಅಪಾರ ಹಾಗೂ ಬಹಳಷ್ಟು ಬಡ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಹಾಗೆಯೇ ಈ ಶಾಲೆಯನ್ನೂ ಉಳಿಸಿಕೊಂಡು ಸ್ಮಾರಕ ನಿರ್ಮಿಸಲಿ’ ಎಂದು ಸೇನಾಪಡೆಯ ಜಿಲ್ಲಾ ಘಟಕದ ಅಧ್ಯಕ್ಷ ತೇಜೇಶ್ ಲೋಕೇಶ್ ಗೌಡ ಒತ್ತಾಯಿಸಿದರು.</p>.<p>ಹೋರಾಟಗಾರರಾದ ಪ.ಮಲ್ಲೇಶ್, ಸ.ರ.ಸುದರ್ಶನ್, ಪುರುಷೋತ್ತಮ್, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>