ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಧರಣಿ ನಡೆಯಲಿದ್ದು, ಇದರಲ್ಲಿ ವಿವಿಧ ಕನ್ನಡಪರ, ದಲಿತಪರ, ರೈತಪರ, ಕಾರ್ಮಿಕ ಪರ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಸಾಹಿತಿಗಳಾದ ಎಸ್.ಜಿ.ಸಿದ್ದರಾಮಯ್ಯ, ಬರಗೂರು ರಾಮಚಂದ್ರಪ್ಪ, ಬಿ.ಟಿ.ಲಲಿತಾ ನಾಯಕ, ವಸುಂಧರಾ ಭೂಪತಿ, ರಾ.ನಂ.ಚಂದ್ರಶೇಖರ ಸೇರಿದಂತೆ ಇನ್ನು ಹಲವು ಮಂದಿ ಭಾಗವಹಿಸಲಿದ್ದಾರೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸ.ರ.ಸುದರ್ಶನ ತಿಳಿಸಿದ್ದಾರೆ.