<p><strong>ಮೈಸೂರು</strong>: ಮಹಾರಾಣಿ ಮಾದರಿ (ಎನ್ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಇಲ್ಲಿನ ಎನ್ಟಿಎಂ ಸರ್ಕಾರಿ ಶಾಲೆಯ ಮುಂದೆ ಸತತ 6ನೇ ದಿನವಾದ ಶನಿವಾರವೂ ಪ್ರತಿಭಟನೆ ನಡೆಯಿತು.</p>.<p>ಪ್ರತಿದಿನ ಒಂದೊಂದು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಶನಿವಾರ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದಲ್ಲಿ ಧರಣಿ ನಡೆಯಿತು.</p>.<p>ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ಪಕ್ಷದ ವಿರೋಧವಿಲ್ಲ. ಆದರೆ ಐತಿಹಾಸಿಕ ಮಹತ್ವ ಇರುವ ಎನ್ ಟಿಎಂ ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ವಿರೋಧ ಇದೆ ಎಂದು ಎಎಪಿ ಜಿಲ್ಲಾ ಸಂಚಾಲಕಿ ಮಾಲವಿಕ ಗುಬ್ಬಿವಾಣಿ ಹೇಳಿದರು.</p>.<p>ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡುವ ಹಟವನ್ನು ತೊರೆಯಬೇಕು. ಶಾಲೆಯೂ ಉಳಿಯಲಿ, ಸ್ಮಾರಕವೂ ನಿರ್ಮಾಣ ಆಗಲಿ ಎಂದು ಒತ್ತಾಯಿಸಿದರು.</p>.<p>ಸಂಸದರ ವಿರುದ್ಧ ಆಕ್ರೋಶ: ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಹೇಳಿರುವ ಸಂಸದರಾದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ ಪ್ರಸಾದ್ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮಹಾರಾಣಿ ಮಾದರಿ (ಎನ್ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಇಲ್ಲಿನ ಎನ್ಟಿಎಂ ಸರ್ಕಾರಿ ಶಾಲೆಯ ಮುಂದೆ ಸತತ 6ನೇ ದಿನವಾದ ಶನಿವಾರವೂ ಪ್ರತಿಭಟನೆ ನಡೆಯಿತು.</p>.<p>ಪ್ರತಿದಿನ ಒಂದೊಂದು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಶನಿವಾರ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದಲ್ಲಿ ಧರಣಿ ನಡೆಯಿತು.</p>.<p>ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ಪಕ್ಷದ ವಿರೋಧವಿಲ್ಲ. ಆದರೆ ಐತಿಹಾಸಿಕ ಮಹತ್ವ ಇರುವ ಎನ್ ಟಿಎಂ ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ವಿರೋಧ ಇದೆ ಎಂದು ಎಎಪಿ ಜಿಲ್ಲಾ ಸಂಚಾಲಕಿ ಮಾಲವಿಕ ಗುಬ್ಬಿವಾಣಿ ಹೇಳಿದರು.</p>.<p>ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡುವ ಹಟವನ್ನು ತೊರೆಯಬೇಕು. ಶಾಲೆಯೂ ಉಳಿಯಲಿ, ಸ್ಮಾರಕವೂ ನಿರ್ಮಾಣ ಆಗಲಿ ಎಂದು ಒತ್ತಾಯಿಸಿದರು.</p>.<p>ಸಂಸದರ ವಿರುದ್ಧ ಆಕ್ರೋಶ: ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಹೇಳಿರುವ ಸಂಸದರಾದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ ಪ್ರಸಾದ್ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>