6 ತಿಂಗಳ ಬಳಿಕ ಅಧ್ಯಕ್ಷೆ ಪದ್ಮಮ್ಮ ನೇತೃತ್ವದಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಸದಸ್ಯ ಗಣಪತಿ ಇಂಡೋಳ್ಕರ್ ಮಾತನಾಡಿ, ಶಿಕ್ಷಣ ಇಲಾಖೆಯು ಬಿಸಿಯೂಟವನ್ನು ಕೋವಿಡ್ ಹಂತದಲ್ಲೂ ಮುಂದುವರೆಸಿದ್ದು, ಆಶ್ರಮ ಶಾಲೆ ವಿದ್ಯಾರ್ಥಿಗಳು ಈ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ. ಗಿರಿಜನ, ಹಕ್ಕಿಪಿಕ್ಕಿ, ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೋವಿಡ್ ಹಂತದಲ್ಲಿ ಪೌಷ್ಟಿಕ ಆಹಾರ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ ಎಂದು ಬಿ.ಸಿ.ಎಂ. ಇಲಾಖೆ ಅಧಿಕಾರಿ ಬಸವರಾಜ್ ಅವರನ್ನು ತರಾಟೆಗೆ ತೆಗೆದುಕೊಂಡರು.