‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಇಬ್ಬರು ವಿದ್ಯಾರ್ಥಿನಿಯರಷ್ಟೆ ದೌರ್ಜನ್ಯಕ್ಕೆ ಒಳಗಾಗಿಲ್ಲ. ಆ ಮಠದ ವಸತಿನಿಲಯದಲ್ಲಿನ ಬಹಳಷ್ಟು ವಿದ್ಯಾರ್ಥಿನಿಯರು ಶೋಷಣೆಗೆ ಒಳಗಾಗಿದ್ದಾರೆ. ಅವರೂ ನೊಂದಿದ್ದಾರೆ; ನಲುಗಿದ್ದಾರೆ. ಹೀಗಾಗಿ, ಪ್ರಕರಣದ ಬಗ್ಗೆ ನ್ಯಾಯಾಂಗದ ಸುಪರ್ದಿಯಲ್ಲಿ ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.