ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಾಪ‍ನ ಅಧಿಕಾರಿ ಎಸಿಬಿ ಬಲೆಗೆ

Last Updated 5 ಜನವರಿ 2021, 6:38 IST
ಅಕ್ಷರ ಗಾತ್ರ

ಮೈಸೂರು: ಜಮೀನನ್ನು ಸರ್ವೇ ಮಾಡಲು ₹ 8 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ತಾಲ್ಲೂಕು ಕಚೇರಿಯ ಭೂಮಾಪನ ಅಧಿಕಾರಿ ಹನುಂತರಾಯಪ್ಪ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಬಲೆಗೆ
ಬಿದ್ದಿದ್ದಾರೆ.

ಇವರು ವ್ಯಕ್ತಿಯೊಬ್ಬರ ಜಮೀನನ್ನು ಸರ್ವೇ ಮಾಡಿಕೊಡಲು ₹ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ವ್ಯಕ್ತಿಯು ಈ ಸಂಬಂಧ ಎಸಿಬಿಯಲ್ಲಿ ದೂರು ದಾಖಲಿಸಿದ್ದರು. ₹ 8 ಸಾವಿರ ಹಣವನ್ನು ಕಚೇರಿಯಲ್ಲಿ ಪಡೆಯುತ್ತಿದ್ದ ವೇಳೆ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಎಸಿಬಿ ಎಸ್‌.ಪಿ.ಡಾ.ಸುಮನ್ ಡಿ.ಪನೇಕರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಎಚ್.ಪರಶುರಾಮಪ್ಪ, ಇನ್‌ಸ್ಪೆಕ್ಟರರ್‌ಗಳಾದ ಕರೀಂ ರಾವತ್ತಾರ್ ಮತ್ತು ನಿರಂಜನ್ ಕಾರ್ಯಾಚರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT