ತಿರುವನಂತಪುರ: ಕೇರಳದ ಉತ್ತರ ಭಾಗದಲ್ಲಿ ಭಾರಿ ಮಳೆ ಬೀಳುತ್ತಿದ್ದು, ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಗುರುವಾರ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟು, 10 ಮಂದಿ ಕಣ್ಮರೆಯಾಗಿದ್ದಾರೆ.
ಬುಧವಾರ ಇಡೀ ರಾತ್ರಿ ಬಿದ್ದ ಭಾರಿ ಮಳೆಗೆ ಕೊಯಿಕ್ಕೋಡ್ ಜಿಲ್ಲೆಯ ಗ್ರಾಮವೊಂದರಲ್ಲಿ ಬೆಳಿಗ್ಗೆ ಭೂಕುಸಿತ ಉಂಟಾದ ಘಟನೆ ನಡೆದಿದ್ದು, ನಾಲ್ವರು ಸಾವಿಗೀಡಾಗಿ, 10 ಜನ ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.
ಮೇ ಕೊನೆಯ ವಾರ ನೈಋತ್ಯ ಮುಂಗಾರು ಆರಂಭವಾದ ಬಳಿಕ, ಇಲ್ಲಿಯವರೆಗೆ ರಾಜ್ಯದಲ್ಲಿ ಮೃತರ ಸಂಖ್ಯೆ 27ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂ ಕುಸಿತವಾದ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಣ್ಮರೆಯಾದವರಿಗಾಗಿ ಶೋಧ ನಡೆದಿದೆ.