ಮೈಸೂರು: ಹೊಟ್ಟೆ ನೋವು ತಾಳಲಾರದೆ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೈಸೂರು ತಾಲ್ಲೂಕು ಸಿಂಧುವಳ್ಳಿ ಗ್ರಾಮದ ರಂಗನಾಯಕ (65) ಆತ್ಮಹತ್ಯೆಗೆ ಶರಣಾದವರು.
ರಂಗನಾಯಕ ಹಲವು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ತೋರಿಸಿದ್ದರೂ ವಾಸಿಯಾಗಿರಲಿಲ್ಲ. ದಿನೇ ದಿನೇ ನೋವು ಹೆಚ್ಚಾಗಿದ್ದರಿಂದ ತಡೆಯಲಾರದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೈಸೂರು ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.