ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಇವರು, ಜೂನ್ 30ರಂದು ಮದ್ಯ ಸೇವಿಸಿ ರಾತ್ರಿ ಮಲಗಿದ್ದಾರೆ. ಮಧ್ಯರಾತ್ರಿ ನೀರು ಕುಡಿಯಲು ಎದ್ದಾಗ ಆಕಸ್ಮಿಕವಾಗಿ ಜಾರಿ ಬಿದ್ದು, ಬಾಗಿಲು ಮತ್ತು ಗೋಡೆಗೆ ತಲೆ ಬಡಿದಿದೆ. ಇದರಿಂದ ಗಾಯಗೊಂಡ ಇವರು ನಂತರ ಕೆ.ಆರ್.ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ಸ್ಕ್ಯಾನಿಂಗ್ಗಳನ್ನು ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.