ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಿಲಿಗೆ ತಲೆ ಬಡಿದು ಸಾವು

Last Updated 5 ಜುಲೈ 2021, 4:35 IST
ಅಕ್ಷರ ಗಾತ್ರ

ಮೈಸೂರು: ತಲೆಯು ಆಕಸ್ಮಿಕವಾಗಿ ಬಾಗಿಲಿಗೆ ತಗುಲಿ ಗಾಯಗೊಂಡಿದ್ದ, ಇಲ್ಲಿನ ಜನತಾನಗರದ ನಿವಾಸಿ ಶಿವಣ್ಣ (31) ಅವರು ಮೃತಪಟ್ಟಿದ್ದಾರೆ.

ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಇವರು, ಜೂನ್ 30ರಂದು ಮದ್ಯ ಸೇವಿಸಿ ರಾತ್ರಿ ಮಲಗಿದ್ದಾರೆ. ಮಧ್ಯರಾತ್ರಿ ನೀರು ಕುಡಿಯಲು ಎದ್ದಾಗ ಆಕಸ್ಮಿಕವಾಗಿ ಜಾರಿ ಬಿದ್ದು, ಬಾಗಿಲು ಮತ್ತು ಗೋಡೆಗೆ ತಲೆ ಬಡಿದಿದೆ. ಇದರಿಂದ ಗಾಯಗೊಂಡ ಇವರು ನಂತರ ಕೆ.ಆರ್.ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ಸ್ಕ್ಯಾನಿಂಗ್‌ಗಳನ್ನು ಮಾಡಿಸಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT