<p><strong>ಮೈಸೂರು:</strong> ಈರುಳ್ಳಿ ದಾಸ್ತಾನಿನ ಮೇಲೆ ಜಿಲ್ಲಾಡಳಿತ ಮಿತಿ ಹೇರಿ ಮಂಗಳವಾರ ಆದೇಶ ಹೊರಡಿಸಿದೆ.</p>.<p>ಸಗಟು ಮಾರಾಟಗಾರರು, ಡೀಲರ್ಗಳು, ಉತ್ಪಾದಕರು ಹಾಗೂ ಕಮಿಷನ್ ಏಜೆಂಟ್ಗಳು 250 ಕ್ವಿಂಟಲ್ ಹಾಗೂ ಚಿಲ್ಲರೆ ಮಾರಾಟಗಾರರು50 ಕ್ವಿಂಟಲ್ನಷ್ಟು ಈರುಳ್ಳಿಯನ್ನು ಮಾತ್ರ ದಾಸ್ತಾನು ಇಟ್ಟುಕೊಳ್ಳಬಹುದು.</p>.<p>ಒಂದು ವೇಳೆ ಗರಿಷ್ಠ ದಾಸ್ತಾನಿನ ಈ ಮಿತಿಯನ್ನು ಮೀರಿ ಸಂಗ್ರಹಿಸಿದವರ ಮೇಲೆ ಅಗತ್ಯ ವಸ್ತುಗಳ ಕಾಯ್ದೆ–1955ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.</p>.<p>ಈರುಳ್ಳಿಯ ಸಗಟು ಮಾರಾಟಗಾರರು, ಡೀಲರ್ಗಳು, ಕಮಿಷನ್ ಏಜೆಂಟ್ಗಳು ಮತ್ತು ಈರುಳ್ಳಿಯ ಚಿಲ್ಲರೆ ಮಾರಾಟಗಾರರು ಕರ್ನಾಟಕ ಅಗತ್ಯ ವಸ್ತುಗಳ ಪರವಾನಗಿ ಆದೇಶ 1986ರಂತೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಪರವಾನಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಎಲ್ಲ ದಾಸ್ತಾನು ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.</p>.<p>ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಪೂರೈಕೆ ಪ್ರಮಾಣ ಹೆಚ್ಚಾದರೂ ಬೆಲೆ ಇಳಿಯದೇ ಏರಿಕೆಯಾಗುತ್ತಿದ್ದು, ಕಾಳಸಂತೆಯಲ್ಲಿ ಅಕ್ರಮ ದಾಸ್ತಾನು ನಡೆಯುತ್ತಿರಬಹುದು ಎಂದು ಸೋಮವಾರವಷ್ಟೇ ‘ಪ್ರಜಾವಾಣಿ’ ‘ಈರುಳ್ಳಿ ದರಕ್ಕೆ ಬೀಳದ ಕಡಿವಾಣ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಈರುಳ್ಳಿ ದಾಸ್ತಾನಿನ ಮೇಲೆ ಜಿಲ್ಲಾಡಳಿತ ಮಿತಿ ಹೇರಿ ಮಂಗಳವಾರ ಆದೇಶ ಹೊರಡಿಸಿದೆ.</p>.<p>ಸಗಟು ಮಾರಾಟಗಾರರು, ಡೀಲರ್ಗಳು, ಉತ್ಪಾದಕರು ಹಾಗೂ ಕಮಿಷನ್ ಏಜೆಂಟ್ಗಳು 250 ಕ್ವಿಂಟಲ್ ಹಾಗೂ ಚಿಲ್ಲರೆ ಮಾರಾಟಗಾರರು50 ಕ್ವಿಂಟಲ್ನಷ್ಟು ಈರುಳ್ಳಿಯನ್ನು ಮಾತ್ರ ದಾಸ್ತಾನು ಇಟ್ಟುಕೊಳ್ಳಬಹುದು.</p>.<p>ಒಂದು ವೇಳೆ ಗರಿಷ್ಠ ದಾಸ್ತಾನಿನ ಈ ಮಿತಿಯನ್ನು ಮೀರಿ ಸಂಗ್ರಹಿಸಿದವರ ಮೇಲೆ ಅಗತ್ಯ ವಸ್ತುಗಳ ಕಾಯ್ದೆ–1955ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.</p>.<p>ಈರುಳ್ಳಿಯ ಸಗಟು ಮಾರಾಟಗಾರರು, ಡೀಲರ್ಗಳು, ಕಮಿಷನ್ ಏಜೆಂಟ್ಗಳು ಮತ್ತು ಈರುಳ್ಳಿಯ ಚಿಲ್ಲರೆ ಮಾರಾಟಗಾರರು ಕರ್ನಾಟಕ ಅಗತ್ಯ ವಸ್ತುಗಳ ಪರವಾನಗಿ ಆದೇಶ 1986ರಂತೆ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಪರವಾನಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಎಲ್ಲ ದಾಸ್ತಾನು ಕೇಂದ್ರಗಳ ಮೇಲೆ ಅನಿರೀಕ್ಷಿತ ದಾಳಿ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.</p>.<p>ಎಪಿಎಂಸಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಪೂರೈಕೆ ಪ್ರಮಾಣ ಹೆಚ್ಚಾದರೂ ಬೆಲೆ ಇಳಿಯದೇ ಏರಿಕೆಯಾಗುತ್ತಿದ್ದು, ಕಾಳಸಂತೆಯಲ್ಲಿ ಅಕ್ರಮ ದಾಸ್ತಾನು ನಡೆಯುತ್ತಿರಬಹುದು ಎಂದು ಸೋಮವಾರವಷ್ಟೇ ‘ಪ್ರಜಾವಾಣಿ’ ‘ಈರುಳ್ಳಿ ದರಕ್ಕೆ ಬೀಳದ ಕಡಿವಾಣ’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>