<p><strong>ಮೈಸೂರು:</strong> ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ಚೌಕದಲ್ಲಿ ಹಾಗೂ ನೆಹರೂ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಬ್ಯಾಂಕ್ಗಳಲ್ಲಿ ಹಿಂದಿ ಬಳಕೆ ನಿಲ್ಲಿಸಿ, ಕನ್ನಡ ಭಾಷೆಯನ್ನು ಬಳಕೆಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನೆಹರೂ ವೃತ್ತದ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿಯ ಮುಂದೆ ಘೋಷಣೆಗಳನ್ನು ಕೂಗಿದರು.</p>.<p>ಬ್ಯಾಂಕಿನ ಎಲ್ಲ ಸೇವೆಗಳನ್ನು ಕನ್ನಡದಲ್ಲೇ ನೀಡಬೇಕು, ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ಕೊಡಬೇಕು, ಕನ್ನಡ ಬಾರದ ಸಿಬ್ಬಂದಿಯನ್ನು ಅವರ ಮಾತೃಭಾಷೆಗಳ ರಾಜ್ಯಕ್ಕೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ಕುಮಾರ್ ಹಾಗೂ ಇತರರು ಇದ್ದರು.</p>.<p><strong>ಹಿಂದಿ ದಿವಸ್ ಆಚರಣೆ ನಿಲ್ಲಿಸಲು ಒತ್ತಾಯ</strong></p>.<p>ರಾಜ್ಯದಲ್ಲಿ ತ್ರಿಭಾಷಾ ನೀತಿ ಬೇಡ. ಹಿಂದಿ ದಿವಸ್ ಆಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಒತ್ತಾಯಿಸಿದರು.</p>.<p>ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗಿರೀಶ್ ಶಿವಾರ್ಚಕ ಮಾತನಾಡಿ, ‘ಕನ್ನಡಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಸೆ. 14ರಂದು ಹಿಂದಿ ದಿವಸ ಆಚರಣೆ ಮಾಡಬೇಕು ಎಂಬ ನಿಯಮವನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಶಿವರಾಜಗೌಡ, ಕುಮಾರ್ರಾಜೇ ಅರಸ್, ಧನರಾಜ್, ಕೆ.ಪ್ರಕಾಶ್, ಲೋಕೇಶ್ ಇದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/hindi-imposition-twitter-campaign-by-karnataka-rakshana-vedike-866409.html" target="_blank">ಹಿಂದಿ ಹೇರಿಕೆಗೆ ಖಂಡನೆ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಟ್ವಿಟರ್ ಅಭಿಯಾನ</a></p>.<p><strong>‘ಉದ್ಯೋಗ ಹಿಂದಿ ಭಾಷಿಕರ ಪಾಲು’</strong></p>.<p>ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಾಜಶೇಖರ, ‘ಕನ್ನಡಿಗರಿಗೆ ಸಲ್ಲಬೇಕಾದ ಉದ್ಯೋಗವು ಹಿಂದಿ ಭಾಷಿಕರ ಪಾಲಾಗುತ್ತಿದೆ. ಕನ್ನಡ ಮಕ್ಕಳಿಗೆ ಸರ್ಕಾರವೇ ಅನ್ಯಾಯ ಮಾಡುತ್ತಿದೆ’ ಎಂದು ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಹರಿಹಾಯ್ದರು.</p>.<p>ಹಿಂದಿ ದಿವಸ ಆಚರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಜಯ್ ಹಾಗೂ ಇತರರು ಇದ್ದರು.</p>.<p><strong>ರೈಲು ನಿಲ್ದಾಣದಲ್ಲಿ ಕನ್ನಡ ಬಳಕೆಗೆ ಆಗ್ರಹ</strong></p>.<p>ಕರ್ನಾಟಕ ಜನಸೈನ್ಯ ಸಂಘಟನೆಯ ಕಾರ್ಯಕರ್ತರು ರೈಲು ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ರೈಲು ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಬೇಕು, ಮುಂಗಡ ಟಿಕೆಟ್ಗಳ ಅರ್ಜಿ ಕನ್ನಡದಲ್ಲಿರಬೇಕು, ತ್ರಿಭಾಷಾ ನೀತಿಯನ್ನು ತೊಲಗಿಸಿ, ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು, ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪರಮೇಶ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ಚೌಕದಲ್ಲಿ ಹಾಗೂ ನೆಹರೂ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಬ್ಯಾಂಕ್ಗಳಲ್ಲಿ ಹಿಂದಿ ಬಳಕೆ ನಿಲ್ಲಿಸಿ, ಕನ್ನಡ ಭಾಷೆಯನ್ನು ಬಳಕೆಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನೆಹರೂ ವೃತ್ತದ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿಯ ಮುಂದೆ ಘೋಷಣೆಗಳನ್ನು ಕೂಗಿದರು.</p>.<p>ಬ್ಯಾಂಕಿನ ಎಲ್ಲ ಸೇವೆಗಳನ್ನು ಕನ್ನಡದಲ್ಲೇ ನೀಡಬೇಕು, ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ಕೊಡಬೇಕು, ಕನ್ನಡ ಬಾರದ ಸಿಬ್ಬಂದಿಯನ್ನು ಅವರ ಮಾತೃಭಾಷೆಗಳ ರಾಜ್ಯಕ್ಕೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್ಕುಮಾರ್ ಹಾಗೂ ಇತರರು ಇದ್ದರು.</p>.<p><strong>ಹಿಂದಿ ದಿವಸ್ ಆಚರಣೆ ನಿಲ್ಲಿಸಲು ಒತ್ತಾಯ</strong></p>.<p>ರಾಜ್ಯದಲ್ಲಿ ತ್ರಿಭಾಷಾ ನೀತಿ ಬೇಡ. ಹಿಂದಿ ದಿವಸ್ ಆಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಒತ್ತಾಯಿಸಿದರು.</p>.<p>ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗಿರೀಶ್ ಶಿವಾರ್ಚಕ ಮಾತನಾಡಿ, ‘ಕನ್ನಡಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಸೆ. 14ರಂದು ಹಿಂದಿ ದಿವಸ ಆಚರಣೆ ಮಾಡಬೇಕು ಎಂಬ ನಿಯಮವನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಶಿವರಾಜಗೌಡ, ಕುಮಾರ್ರಾಜೇ ಅರಸ್, ಧನರಾಜ್, ಕೆ.ಪ್ರಕಾಶ್, ಲೋಕೇಶ್ ಇದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/hindi-imposition-twitter-campaign-by-karnataka-rakshana-vedike-866409.html" target="_blank">ಹಿಂದಿ ಹೇರಿಕೆಗೆ ಖಂಡನೆ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಟ್ವಿಟರ್ ಅಭಿಯಾನ</a></p>.<p><strong>‘ಉದ್ಯೋಗ ಹಿಂದಿ ಭಾಷಿಕರ ಪಾಲು’</strong></p>.<p>ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಾಜಶೇಖರ, ‘ಕನ್ನಡಿಗರಿಗೆ ಸಲ್ಲಬೇಕಾದ ಉದ್ಯೋಗವು ಹಿಂದಿ ಭಾಷಿಕರ ಪಾಲಾಗುತ್ತಿದೆ. ಕನ್ನಡ ಮಕ್ಕಳಿಗೆ ಸರ್ಕಾರವೇ ಅನ್ಯಾಯ ಮಾಡುತ್ತಿದೆ’ ಎಂದು ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಹರಿಹಾಯ್ದರು.</p>.<p>ಹಿಂದಿ ದಿವಸ ಆಚರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಜಯ್ ಹಾಗೂ ಇತರರು ಇದ್ದರು.</p>.<p><strong>ರೈಲು ನಿಲ್ದಾಣದಲ್ಲಿ ಕನ್ನಡ ಬಳಕೆಗೆ ಆಗ್ರಹ</strong></p>.<p>ಕರ್ನಾಟಕ ಜನಸೈನ್ಯ ಸಂಘಟನೆಯ ಕಾರ್ಯಕರ್ತರು ರೈಲು ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ರೈಲು ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಬೇಕು, ಮುಂಗಡ ಟಿಕೆಟ್ಗಳ ಅರ್ಜಿ ಕನ್ನಡದಲ್ಲಿರಬೇಕು, ತ್ರಿಭಾಷಾ ನೀತಿಯನ್ನು ತೊಲಗಿಸಿ, ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು, ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪರಮೇಶ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>