<p><strong>ಮೈಸೂರು: </strong>ಸರ್ಕಾರದ ಆದೇಶವಿದ್ದರೂ ಒಳಚರಂಡಿ ಕಾರ್ಮಿಕರ ಉದ್ಯೋಗ ಕಾಯಂಗೊಳಿಸಲು ಕ್ರಮ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಪೌರಕಾರ್ಮಿಕರಿಂದ ವ್ಯಕ್ತವಾಯಿತು.</p>.<p>ಇಲ್ಲಿನ ಚಾಮುಂಡಿ ಅತಿಥಿಗೃಹದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಪಾಲಿಕೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ಈಗಾಗಲೇ 280 ಹುದ್ದೆಗಳು ಖಾಲಿ ಇವೆ. ಹಾಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 231 ಜನ ಒಳಚರಂಡಿ ಪೌರಕಾರ್ಮಿಕರನ್ನು ನೇಮಕ ಮಾಡಬಹುದು. ಆದರೆ, ಅಧಿಕಾರಿಗಳಲ್ಲಿ ಇರುವ ಜಡತ್ವದಿಂದ ಸ್ಪಂದನೆಯೇ ಇಲ್ಲದಂತಾಗಿದೆ. ಆಯುಕ್ತರಿಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪೌರಕಾರ್ಮಿಕರನ್ನು ಕಾಯಂಗೊಳಿಸುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿಯೇ ಒಳಚರಂಡಿ ಕೆಲಸ ಮಾಡುವ ಪೌರಕಾರ್ಮಿಕರನ್ನು ಪಟ್ಟಿಯಿಂದ ಕೈಬಿಡಲಾಯಿತು. ಇವರಿಗೆ ಸಹಾಯಕರು ಎಂದು ಕರೆದು ಅನ್ಯಾಯ ಮಾಡಲಾಗಿದೆ ಎಂದು ದೂರಿದರು.</p>.<p>ಮುಖಂಡ ರಾಚಯ್ಯ ಮಾತನಾಡಿ, ‘ಕಾಯಂ ಆಗದೇ ಇರುವ ಪೌರಕಾರ್ಮಿಕರು ಮೃತಪಟ್ಟರೆ ಅವರಿಗೆ ಪರಿಹಾರ ಸಿಕ್ಕುವುದಿಲ್ಲ. 30 ವರ್ಷಗಳಷ್ಟು ಕಾಲ ಕೆಲಸ ಮಾಡಿದವರೂ ಇಲ್ಲಿದ್ದಾರೆ. ಈಗಲಾದರೂ ಸಮಸ್ಯೆ ಬಗೆಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ಆಧುನಿಕ ಯಂತ್ರೋಪಕರಣಗಳಿದ್ದರೂ ಪೌರಕಾರ್ಮಿಕರು ಗುಂಡಿಯೊಳಗೆ ಇಳಿಯಲೇಬೇಕಿದೆ. ಕೈಗಳಿಂದಲೇ ಮಲವನ್ನು ಸ್ವಚ್ಛಗೊಳಿಸಲೇಬೇಕಿದೆ. ಇದು ವಾಸ್ತವ ಎಂದು ಅವರು ಹೇಳಿದರು.</p>.<p>ಮುಖಂಡರಾದ ಎನ್.ಮಾರ, ಆರ್.ಆರ್.ರಮೇಶ್, ಅರುಣ್ಕುಮಾರ್, ರಾಜೀವ್, ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಸರ್ಕಾರದ ಆದೇಶವಿದ್ದರೂ ಒಳಚರಂಡಿ ಕಾರ್ಮಿಕರ ಉದ್ಯೋಗ ಕಾಯಂಗೊಳಿಸಲು ಕ್ರಮ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಪೌರಕಾರ್ಮಿಕರಿಂದ ವ್ಯಕ್ತವಾಯಿತು.</p>.<p>ಇಲ್ಲಿನ ಚಾಮುಂಡಿ ಅತಿಥಿಗೃಹದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಪಾಲಿಕೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.</p>.<p>ಈಗಾಗಲೇ 280 ಹುದ್ದೆಗಳು ಖಾಲಿ ಇವೆ. ಹಾಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 231 ಜನ ಒಳಚರಂಡಿ ಪೌರಕಾರ್ಮಿಕರನ್ನು ನೇಮಕ ಮಾಡಬಹುದು. ಆದರೆ, ಅಧಿಕಾರಿಗಳಲ್ಲಿ ಇರುವ ಜಡತ್ವದಿಂದ ಸ್ಪಂದನೆಯೇ ಇಲ್ಲದಂತಾಗಿದೆ. ಆಯುಕ್ತರಿಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದರು.</p>.<p>ಪೌರಕಾರ್ಮಿಕರನ್ನು ಕಾಯಂಗೊಳಿಸುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿಯೇ ಒಳಚರಂಡಿ ಕೆಲಸ ಮಾಡುವ ಪೌರಕಾರ್ಮಿಕರನ್ನು ಪಟ್ಟಿಯಿಂದ ಕೈಬಿಡಲಾಯಿತು. ಇವರಿಗೆ ಸಹಾಯಕರು ಎಂದು ಕರೆದು ಅನ್ಯಾಯ ಮಾಡಲಾಗಿದೆ ಎಂದು ದೂರಿದರು.</p>.<p>ಮುಖಂಡ ರಾಚಯ್ಯ ಮಾತನಾಡಿ, ‘ಕಾಯಂ ಆಗದೇ ಇರುವ ಪೌರಕಾರ್ಮಿಕರು ಮೃತಪಟ್ಟರೆ ಅವರಿಗೆ ಪರಿಹಾರ ಸಿಕ್ಕುವುದಿಲ್ಲ. 30 ವರ್ಷಗಳಷ್ಟು ಕಾಲ ಕೆಲಸ ಮಾಡಿದವರೂ ಇಲ್ಲಿದ್ದಾರೆ. ಈಗಲಾದರೂ ಸಮಸ್ಯೆ ಬಗೆಹರಿಸಬೇಕು’ ಎಂದು ಮನವಿ ಮಾಡಿದರು.</p>.<p>ಆಧುನಿಕ ಯಂತ್ರೋಪಕರಣಗಳಿದ್ದರೂ ಪೌರಕಾರ್ಮಿಕರು ಗುಂಡಿಯೊಳಗೆ ಇಳಿಯಲೇಬೇಕಿದೆ. ಕೈಗಳಿಂದಲೇ ಮಲವನ್ನು ಸ್ವಚ್ಛಗೊಳಿಸಲೇಬೇಕಿದೆ. ಇದು ವಾಸ್ತವ ಎಂದು ಅವರು ಹೇಳಿದರು.</p>.<p>ಮುಖಂಡರಾದ ಎನ್.ಮಾರ, ಆರ್.ಆರ್.ರಮೇಶ್, ಅರುಣ್ಕುಮಾರ್, ರಾಜೀವ್, ಗಣೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>