<p><strong>ಮೈಸೂರು</strong>: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ಪಿಎಸ್ಎಸ್ಕೆ) ಮಂಗಳವಾರ (ಆ.11) ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಗುವುದು. ಆ.20ರಿಂದ ಕಬ್ಬು ಅರೆಯುವಿಕೆ ಆರಂಭವಾಗಲಿದೆ’ ಎಂದು ಬಿಜೆಪಿ ಶಾಸಕ, ನಿರಾಣಿ ಸಕ್ಕರೆ ಕಾರ್ಖಾನೆ ಸಮೂಹದ ಅಧ್ಯಕ್ಷ ಮುರುಗೇಶ ನಿರಾಣಿ ಸೋಮವಾರ ಇಲ್ಲಿ ತಿಳಿಸಿದರು.</p>.<p>‘ರೈತರು, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಖಾನೆಗೆ ಕಾಯಕಲ್ಪ ಕೊಡುವೆ. ಈ ಹಿಂದಿದ್ದ ಎಲ್ಲ ನೌಕರರನ್ನು ಮುಂದುವರಿಸಲಾಗುವುದು. ಹೊಸ ನೇಮಕಾತಿಯಲ್ಲಿ ಮೈಸೂರು, ಮಂಡ್ಯ ಭಾಗದವರಿಗೆ ಆದ್ಯತೆ ನೀಡಲಾಗುವುದು’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>‘ಮೈಸೂರು ಜಿಲ್ಲೆಯ ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಯ ಗುತ್ತಿಗೆಯೂ ನಮಗೆ ಸಿಕ್ಕಿದೆ. ಮುಂದಿನ ವರ್ಷ ಕಬ್ಬು ಅರೆಯಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ಪಿಎಸ್ಎಸ್ಕೆ) ಮಂಗಳವಾರ (ಆ.11) ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಗುವುದು. ಆ.20ರಿಂದ ಕಬ್ಬು ಅರೆಯುವಿಕೆ ಆರಂಭವಾಗಲಿದೆ’ ಎಂದು ಬಿಜೆಪಿ ಶಾಸಕ, ನಿರಾಣಿ ಸಕ್ಕರೆ ಕಾರ್ಖಾನೆ ಸಮೂಹದ ಅಧ್ಯಕ್ಷ ಮುರುಗೇಶ ನಿರಾಣಿ ಸೋಮವಾರ ಇಲ್ಲಿ ತಿಳಿಸಿದರು.</p>.<p>‘ರೈತರು, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಖಾನೆಗೆ ಕಾಯಕಲ್ಪ ಕೊಡುವೆ. ಈ ಹಿಂದಿದ್ದ ಎಲ್ಲ ನೌಕರರನ್ನು ಮುಂದುವರಿಸಲಾಗುವುದು. ಹೊಸ ನೇಮಕಾತಿಯಲ್ಲಿ ಮೈಸೂರು, ಮಂಡ್ಯ ಭಾಗದವರಿಗೆ ಆದ್ಯತೆ ನೀಡಲಾಗುವುದು’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p>‘ಮೈಸೂರು ಜಿಲ್ಲೆಯ ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಯ ಗುತ್ತಿಗೆಯೂ ನಮಗೆ ಸಿಕ್ಕಿದೆ. ಮುಂದಿನ ವರ್ಷ ಕಬ್ಬು ಅರೆಯಲಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>