ಮೈಸೂರು: ‘ದಸರಾ ಸಮಯದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಡಿ’ ಎಂದು ಡಿಸಿಪಿ ಎಂ.ಮುತ್ತುರಾಜ್ ರೌಡಿ ಶೀಟರ್ಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ನಗರದ ಕೇಂದ್ರ ಕಾರಾಗೃಹದ ಕಾರಾಗೃಹ ಸಿಬ್ಬಂದಿ ತರಬೇತಿ ಸಂಸ್ಥೆಯ ಕವಾಯತು ಮೈದಾನದಲ್ಲಿ ಗುರುವಾರ ನಗರದ ರೌಡಿಶೀಟರ್ಗಳ ಪರೇಡ್ ನಡೆಸಿದ ಡಿಸಿಪಿ, ಹಲವು ಸೂಚನೆ ನೀಡಿದರು.
‘ದಸರಾ ಮಹೋತ್ಸವಕ್ಕೆ ದೇಶ–ವಿದೇಶಗಳಿಂದಲೂ ಸಹ ಪ್ರವಾಸಿಗರು ಬರುತ್ತಾರೆ. ಈ ಸಮಯದಲ್ಲಿ ಪ್ರವಾಸಿಗರಿಗೆ ನಿಮ್ಮಿಂದ ಯಾವುದೇ ರೀತಿಯ ತೊಂದರೆ ಉಂಟಾಗಬಾರದು’ ಎಂದು ಕಠಿಣ ಎಚ್ಚರಿಕೆ ರವಾನಿಸಿದರು.
ಸಿ.ಸಿ.ಬಿ. ಘಟಕದ ಎ.ಸಿ.ಪಿ. ವಿ.ಮರಿಯಪ್ಪ, ರೌಡಿ ಪ್ರತಿಬಂಧಕ ದಳದ ಪೊಲೀಸ್ ಇನ್ಸ್ಪೆಕ್ಟರ್ ಮಲ್ಲೇಶ್.ಎ, ಸಿ.ಸಿ.ಬಿ.ಯ ಪೊಲೀಸ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್ ರೌಡಿ ಶೀಟರ್ಗಳ ಚಟುವಟಿಕೆಗಳ ಬಗ್ಗೆ ವಿಚಾರಣೆ ನಡೆಸಿದರು.