ಈ ಎಲ್ಲ ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಪದ್ಮಾ, ‘ಅಂಬೇಡ್ಕರ್ ನಗರದಲ್ಲಿ ಹೊಸ ಅಂಗನವಾಡಿ ಕೇಂದ್ರ ಸ್ಥಾಪನೆ ಸದ್ಯಕ್ಕೆ ಕಷ್ಟ. ಇದಕ್ಕೆ ಸರ್ಕಾರದ ಅನುಮತಿ ಬೇಕಿರುವುದರಿಂದ ಒಂದಷ್ಟು ಸಮಯ ಹಿಡಿಯುತ್ತದೆ. ಆದರೆ, ನಾಚನಹಳ್ಳಿ ಪಾಳ್ಯ, ಶಾಂತಿನಗರ, ಭಾರತನಗರಗಳಲ್ಲಿನ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಲಾಗುವುದು’ ಎಂದು ಭರವಸೆ ನೀಡಿದರು.