‘ಪರ್ವ’ ನಾಟಕ ಪ್ರದರ್ಶನಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳಿಗ್ಗೆ 10ಕ್ಕೆ ಕಲಾಮಂದಿರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಎಸ್.ಎಲ್. ಭೈರಪ್ಪ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ, ಮಾರ್ಚ್ 12, 13 ಮತ್ತು 14ರಂದು ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿರುವ ನಾಟಕದ ಟಿಕೆಟ್ ಬಿಡುಗಡೆ ಮಾಡಲಿದ್ದಾರೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.