<p><strong>ಮೈಸೂರು:</strong> ಹಿರಿಯ ನಾಗರಿಕರಿಗೆ ಘನತೆಯ ಬದುಕು ಸಾಗಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪಿಂಚಣಿದಾರರ, ನಿವೃತ್ತಿದಾರರ ಸಮನ್ವಯ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಸಮಿತಿಯ ಸದಸ್ಯರು, ಸರ್ಕಾರಗಳು ಹಿರಿಯ ನಾಗರಿಕರ ಬದುಕಿನ ಬಗ್ಗೆ ತಾತ್ಸಾರದ ಧೋರಣೆ ಬದಲಾಯಿಸಿಲ್ಲ. ವೃದ್ಧರು ದೇಶಕ್ಕೆ ಆರ್ಥಿಕ ಹೊರೆ ಎಂದು ಪರಿಗಣಿಸುವ ನಿಲುವು ಬದಲಾಗಬೇಕು ಎಂದು ಆಗ್ರಹಿಸಿದರು.</p>.<p>ಭಾರತದಲ್ಲಿ ಪಿಂಚಣಿ ನಿಧಿಯ ಖಾಸಗೀಕರಣದ ಪ್ರಯತ್ನ ನಡೆಯುತ್ತಿದೆ. ವಿದೇಶಿ ಪಿಂಚಣಿ ನಿಧಿ ನಿರ್ವಹಣಾ ಸಂಸ್ಥೆಗಳಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಈ ಪ್ರಯತ್ನವನ್ನು ವಿರೋಧಿಸುವುದಾಗಿ ಪ್ರತಿಭಟನಕಾರರು ತಿಳಿಸಿದರು.</p>.<p>ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್), ಇಪಿಎಸ್–95ರ ನಕಾರಾತ್ಮಕ ಅಂಶಗಳ ಕುರಿತು ಈ ದೇಶದ ಕಾರ್ಮಿಕ ವರ್ಗ ಹಲವು ಹೋರಾಟಗಳನ್ನು ಮಾಡಿದರೂ ಸರ್ಕಾರ ಗಮನ ಹರಿಸದೇ ಇರುವುದು ಖಂಡನೀಯ ಎಂದರು.</p>.<p>ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟಕ್ಕೆ (ಡಬ್ಲ್ಯುಎಫ್ಟಿಯು) ಸಂಯೋಜಿತವಾಗಿರುವ ಪಿಂಚಣಿದಾರರ, ನಿವೃತ್ತರ ಅಂತರ ರಾಷ್ಟ್ರೀಯ ಕಾರ್ಮಿಕ ಸಂಘಟನೆ ಅ.1 ರಂದು ವಿಶ್ವದಾದ್ಯಂತ ಪ್ರತಿಭಟನೆಗೆ ಕರೆನೀಡಿತ್ತು. ಇದರ ಅಂಗವಾಗಿ ಮೈಸೂರಿನಲ್ಲೂ ಪ್ರತಿಭಟನೆ ನಡೆಯಿತು.</p>.<p>ಸಂಘದ ಸಂಚಾಲಕ ಲ.ಜಗನ್ನಾಥ ಹಾಗೂ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹಿರಿಯ ನಾಗರಿಕರಿಗೆ ಘನತೆಯ ಬದುಕು ಸಾಗಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪಿಂಚಣಿದಾರರ, ನಿವೃತ್ತಿದಾರರ ಸಮನ್ವಯ ಸಮಿತಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.</p>.<p>ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಸಮಿತಿಯ ಸದಸ್ಯರು, ಸರ್ಕಾರಗಳು ಹಿರಿಯ ನಾಗರಿಕರ ಬದುಕಿನ ಬಗ್ಗೆ ತಾತ್ಸಾರದ ಧೋರಣೆ ಬದಲಾಯಿಸಿಲ್ಲ. ವೃದ್ಧರು ದೇಶಕ್ಕೆ ಆರ್ಥಿಕ ಹೊರೆ ಎಂದು ಪರಿಗಣಿಸುವ ನಿಲುವು ಬದಲಾಗಬೇಕು ಎಂದು ಆಗ್ರಹಿಸಿದರು.</p>.<p>ಭಾರತದಲ್ಲಿ ಪಿಂಚಣಿ ನಿಧಿಯ ಖಾಸಗೀಕರಣದ ಪ್ರಯತ್ನ ನಡೆಯುತ್ತಿದೆ. ವಿದೇಶಿ ಪಿಂಚಣಿ ನಿಧಿ ನಿರ್ವಹಣಾ ಸಂಸ್ಥೆಗಳಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಈ ಪ್ರಯತ್ನವನ್ನು ವಿರೋಧಿಸುವುದಾಗಿ ಪ್ರತಿಭಟನಕಾರರು ತಿಳಿಸಿದರು.</p>.<p>ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್), ಇಪಿಎಸ್–95ರ ನಕಾರಾತ್ಮಕ ಅಂಶಗಳ ಕುರಿತು ಈ ದೇಶದ ಕಾರ್ಮಿಕ ವರ್ಗ ಹಲವು ಹೋರಾಟಗಳನ್ನು ಮಾಡಿದರೂ ಸರ್ಕಾರ ಗಮನ ಹರಿಸದೇ ಇರುವುದು ಖಂಡನೀಯ ಎಂದರು.</p>.<p>ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟಕ್ಕೆ (ಡಬ್ಲ್ಯುಎಫ್ಟಿಯು) ಸಂಯೋಜಿತವಾಗಿರುವ ಪಿಂಚಣಿದಾರರ, ನಿವೃತ್ತರ ಅಂತರ ರಾಷ್ಟ್ರೀಯ ಕಾರ್ಮಿಕ ಸಂಘಟನೆ ಅ.1 ರಂದು ವಿಶ್ವದಾದ್ಯಂತ ಪ್ರತಿಭಟನೆಗೆ ಕರೆನೀಡಿತ್ತು. ಇದರ ಅಂಗವಾಗಿ ಮೈಸೂರಿನಲ್ಲೂ ಪ್ರತಿಭಟನೆ ನಡೆಯಿತು.</p>.<p>ಸಂಘದ ಸಂಚಾಲಕ ಲ.ಜಗನ್ನಾಥ ಹಾಗೂ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>