<p><strong>ಮೈಸೂರು</strong>: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಅಧಿಕಾರಿಗಳದ್ದೇ ‘ದರ್ಬಾರ್’ ನಡೆಯುತ್ತಿದೆ. ಅಧಿಕಾರೇತರ ಸಮಿತಿಯನ್ನು ರಚಿಸಿ, ಸಾರ್ವಜನಿಕರ ಸಹಭಾಗಿತ್ವ ಪಡೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ.</p>.<p>ಮಹೋತ್ಸವಕ್ಕೆ ಸೆ.26ರಂದು ಚಾಲನೆ ದೊರೆಯಲಿದೆ. ಹೀಗೆ ನೋಡಿದರೆ, ಬಹಳ ದಿನಗಳೇನೂ ಉಳಿದಿಲ್ಲ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಕಾರ್ಯಕ್ರಮಗಳ ಪಟ್ಟಿಗಳೂ ಸಿದ್ಧವಾಗಬೇಕು. ಹೊರ ಜಿಲ್ಲೆ, ರಾಜ್ಯ ಮತ್ತು ದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಎಲ್ಲರನ್ನೂ ಒಳಗೊಳ್ಳುವ ಸಮಿತಿಗಳನ್ನು ರಚಿಸುವ ಕಾರ್ಯವಾಗಿಲ್ಲ.</p>.<p>ಮಹೋತ್ಸವದ ಉಪ ಸಮಿತಿಗಳಿಗೆ ಉಪ ವಿಶೇಷಾಧಿಕಾರಿ, ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆ.6ರಂದು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಅವುಗಳಿಗೆ ಅಧಿಕಾರೇತರರನ್ನು ತ್ವರಿತವಾಗಿ ನೇಮಿಸಬೇಕು, ಈ ಮೂಲಕ ಅಧಿಕಾರಿಗಳ ದರ್ಬಾರ್ಗೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಜನಪ್ರತಿನಿಧಿಗಳಿಂದ ಕೇಳಿಬಂದಿತ್ತು. ಈ ಬಾರಿಯೂ ನೇಮಕಾತಿಯಲ್ಲಿ ವಿಳಂಬ ಆಗುತ್ತಿರುವುದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ.</p>.<p>ಯಾವ್ಯಾವ ಸಮಿತಿಗಳು?:</p>.<p>ಸ್ವಾಗತ, ಆಮಂತ್ರಣ ಮತ್ತು ಸ್ಥಳಾವಕಾಶ, ಮೆರವಣಿಗೆ ಮತ್ತು ಪಂಜಿನ ಕವಾಯತು, ಸ್ತಬ್ಧಚಿತ್ರ, ರೈತ (ಗ್ರಾಮೀಣ ದಸರಾ), ಕ್ರೀಡೆ, ಸಾಂಸ್ಕೃತಿಕ ದಸರಾ, ಲಲಿತಕಲೆ, ದೀಪಾಲಂಕಾರ, ಕವಿಗೋಷ್ಠಿ, ಯೋಗ ದಸರಾ, ಯುವ ಸಂಭ್ರಮ/ಯುವ ದಸರಾ, ಮಹಿಳಾ, ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತೆ ಮತ್ತು ವ್ಯವಸ್ಥೆ, ಚಲನಚಿತ್ರ, ಕುಸ್ತಿ ಉಪಸಮಿತಿಗಳನ್ನು ರಚಿಸಲಾಗಿದೆ. ಅವುಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಬಾರಿ ಕೈಗಾರಿಕಾ ದಸರಾ ಹೊಸ ಸೇರ್ಪಡೆಯಾಗಿದೆ.</p>.<p>ಕಳೆದ ಎರಡು ವರ್ಷಗಳು ಕೋವಿಡ್ ಹಿನ್ನೆಲೆಯಲ್ಲಿ ಉತ್ಸವವನ್ನು ಸರಳವಾಗಿ ಹಾಗೂ ಜಂಬೂಸವಾರಿಯನ್ನು ಮೈಸೂರು ಅರಮನೆ ಆವರಣಕ್ಕೆ ಸೀಮಿತಗೊಳಿಸಿ ನಡೆಸಲಾಗಿತ್ತು. ಆದರೆ, ಈ ಬಾರಿ ಅದ್ಧೂರಿ ಹಾಗೂ ವಿಜೃಂಭಣೆಯಿಂದ ನಡೆಸುತ್ತಿರುವುದರಿಂದ ಅಧಿಕಾರೇತರ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರಾಗಲು ಬಹಳ ಬೇಡಿಕೆ ಬಂದಿದೆ. ವಿಶೇಷವಾಗಿ, ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಹೆಚ್ಚಿನ ಲಾಬಿ ನಡೆಸುತ್ತಿದ್ದಾರೆ. ಚುನಾವಣಾ ವರ್ಷವಾದ್ದರಿಂದ ಬಿಜೆಪಿಯವರಿಗೇ ಹೆಚ್ಚಿನ ಮಣೆ ಹಾಕುವ ಸಾಧ್ಯತೆಯೂ ಇದೆ.</p>.<p>ಸಮಿತಿಗಳಿಗೆ ಆಯಾ ಕ್ಷೇತ್ರದ ಪರಿಣತರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರನ್ನೂ ಒಳಗೊಳಿಸಿಕೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.</p>.<p>ಬೇಗ ನಡೆದರೆ ಅನುಕೂಲ:</p>.<p>‘ಈ ಬಾರಿಯಾದರೂ ನೇಮಕ ಪ್ರಕ್ರಿಯೆಯನ್ನು ಬೇಗ ಮುಗಿಸಿದರೆ ಅನುಕೂಲವಾಗುತ್ತದೆ. ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಮುನ್ನ ಜನರ ಅಭಿಪ್ರಾಯಗಳನ್ನು ನಾವು ಮಂಡಿಸುವುದಕ್ಕೆ ಸಹಕಾರಿಯಾಗುತ್ತದೆ. ಇಲ್ಲದಿದ್ದರೆ ಹೆಸರಿಗಷ್ಟೆ ಅಧಿಕಾರಿಗಳು, ಸದಸ್ಯರು ಎಂದುಕೊಳ್ಳಬೇಕಾಗುತ್ತದೆ’ ಎಂದು ಬಿಜೆಪಿ ಮುಖಂಡರೊಬ್ಬರು ಪ್ರತಿಕ್ರಿಯಿಸಿದರು.</p>.<p><strong>ಚರ್ಚಿಸಿ ನಿರ್ಧಾರ</strong></p>.<p><em> ದಸರಾ ಉಪ ಸಮಿತಿಗಳಿಗೆ ಅಧಿಕಾರೇತರ ಸದಸ್ಯರನ್ನು ನೇಮಕದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಂದಿನ ಸಭೆಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.</em></p>.<p><strong>– ಡಾ.ಬಗಾದಿ ಗೌತಮ್, ಜಿಲ್ಲಾಧಿಕಾರಿ</strong></p>.<p><strong>ಸಚಿವರನ್ನು ಕೋರಿದ್ದೇನೆ</strong></p>.<p><em> ನಾಡಹಬ್ಬದಲ್ಲಿ ಎಲ್ಲರನ್ನೂ ಒಳಗೊಳಿಸಿಕೊಳ್ಳಲು ಬಿಜೆಪಿಯೊಂದಿಗೆ ಇತರ ಪಕ್ಷದವರನ್ನೂ ಸಮಿತಿಗಳಿಗೆ ನೇಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರನ್ನು ಕೋರಿದ್ದೇನೆ.</em></p>.<p><strong>– ಸಾ.ರಾ.ಮಹೇಶ್, ಜೆಡಿಎಸ್ ಶಾಸಕ</strong></p>.<p><strong>ಸೆಳೆಯಬಹುದು</strong></p>.<p><em> ದಸರಾದಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಈಗಿನಿಂದಲೇ ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಆಗ, ಪ್ರವಾಸಿಗರನ್ನು ಸೆಳೆಯಬಹುದು.</em></p>.<p><strong>–ಬಿ.ಎಸ್.ಪ್ರಶಾಂತ್, ಅಧ್ಯಕ್ಷ, ಮೈಸೂರು ಸಂಘ–ಸಂಸ್ಥೆಗಳ ಒಕ್ಕೂಟ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಅಧಿಕಾರಿಗಳದ್ದೇ ‘ದರ್ಬಾರ್’ ನಡೆಯುತ್ತಿದೆ. ಅಧಿಕಾರೇತರ ಸಮಿತಿಯನ್ನು ರಚಿಸಿ, ಸಾರ್ವಜನಿಕರ ಸಹಭಾಗಿತ್ವ ಪಡೆದುಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ.</p>.<p>ಮಹೋತ್ಸವಕ್ಕೆ ಸೆ.26ರಂದು ಚಾಲನೆ ದೊರೆಯಲಿದೆ. ಹೀಗೆ ನೋಡಿದರೆ, ಬಹಳ ದಿನಗಳೇನೂ ಉಳಿದಿಲ್ಲ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಕಾರ್ಯಕ್ರಮಗಳ ಪಟ್ಟಿಗಳೂ ಸಿದ್ಧವಾಗಬೇಕು. ಹೊರ ಜಿಲ್ಲೆ, ರಾಜ್ಯ ಮತ್ತು ದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಎಲ್ಲರನ್ನೂ ಒಳಗೊಳ್ಳುವ ಸಮಿತಿಗಳನ್ನು ರಚಿಸುವ ಕಾರ್ಯವಾಗಿಲ್ಲ.</p>.<p>ಮಹೋತ್ಸವದ ಉಪ ಸಮಿತಿಗಳಿಗೆ ಉಪ ವಿಶೇಷಾಧಿಕಾರಿ, ಕಾರ್ಯಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆ.6ರಂದು ನೇಮಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಅವುಗಳಿಗೆ ಅಧಿಕಾರೇತರರನ್ನು ತ್ವರಿತವಾಗಿ ನೇಮಿಸಬೇಕು, ಈ ಮೂಲಕ ಅಧಿಕಾರಿಗಳ ದರ್ಬಾರ್ಗೆ ಕಡಿವಾಣ ಹಾಕಬೇಕು ಎಂಬ ಒತ್ತಾಯ ಜನಪ್ರತಿನಿಧಿಗಳಿಂದ ಕೇಳಿಬಂದಿತ್ತು. ಈ ಬಾರಿಯೂ ನೇಮಕಾತಿಯಲ್ಲಿ ವಿಳಂಬ ಆಗುತ್ತಿರುವುದಕ್ಕೆ ಆಕ್ಷೇಪವೂ ವ್ಯಕ್ತವಾಗಿದೆ.</p>.<p>ಯಾವ್ಯಾವ ಸಮಿತಿಗಳು?:</p>.<p>ಸ್ವಾಗತ, ಆಮಂತ್ರಣ ಮತ್ತು ಸ್ಥಳಾವಕಾಶ, ಮೆರವಣಿಗೆ ಮತ್ತು ಪಂಜಿನ ಕವಾಯತು, ಸ್ತಬ್ಧಚಿತ್ರ, ರೈತ (ಗ್ರಾಮೀಣ ದಸರಾ), ಕ್ರೀಡೆ, ಸಾಂಸ್ಕೃತಿಕ ದಸರಾ, ಲಲಿತಕಲೆ, ದೀಪಾಲಂಕಾರ, ಕವಿಗೋಷ್ಠಿ, ಯೋಗ ದಸರಾ, ಯುವ ಸಂಭ್ರಮ/ಯುವ ದಸರಾ, ಮಹಿಳಾ, ಮಕ್ಕಳ ದಸರಾ, ಆಹಾರ ಮೇಳ, ಸ್ವಚ್ಛತೆ ಮತ್ತು ವ್ಯವಸ್ಥೆ, ಚಲನಚಿತ್ರ, ಕುಸ್ತಿ ಉಪಸಮಿತಿಗಳನ್ನು ರಚಿಸಲಾಗಿದೆ. ಅವುಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಬಾರಿ ಕೈಗಾರಿಕಾ ದಸರಾ ಹೊಸ ಸೇರ್ಪಡೆಯಾಗಿದೆ.</p>.<p>ಕಳೆದ ಎರಡು ವರ್ಷಗಳು ಕೋವಿಡ್ ಹಿನ್ನೆಲೆಯಲ್ಲಿ ಉತ್ಸವವನ್ನು ಸರಳವಾಗಿ ಹಾಗೂ ಜಂಬೂಸವಾರಿಯನ್ನು ಮೈಸೂರು ಅರಮನೆ ಆವರಣಕ್ಕೆ ಸೀಮಿತಗೊಳಿಸಿ ನಡೆಸಲಾಗಿತ್ತು. ಆದರೆ, ಈ ಬಾರಿ ಅದ್ಧೂರಿ ಹಾಗೂ ವಿಜೃಂಭಣೆಯಿಂದ ನಡೆಸುತ್ತಿರುವುದರಿಂದ ಅಧಿಕಾರೇತರ ಸಮಿತಿಗಳಿಗೆ ಅಧ್ಯಕ್ಷರು, ಸದಸ್ಯರಾಗಲು ಬಹಳ ಬೇಡಿಕೆ ಬಂದಿದೆ. ವಿಶೇಷವಾಗಿ, ಆಡಳಿತಾರೂಢ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಹೆಚ್ಚಿನ ಲಾಬಿ ನಡೆಸುತ್ತಿದ್ದಾರೆ. ಚುನಾವಣಾ ವರ್ಷವಾದ್ದರಿಂದ ಬಿಜೆಪಿಯವರಿಗೇ ಹೆಚ್ಚಿನ ಮಣೆ ಹಾಕುವ ಸಾಧ್ಯತೆಯೂ ಇದೆ.</p>.<p>ಸಮಿತಿಗಳಿಗೆ ಆಯಾ ಕ್ಷೇತ್ರದ ಪರಿಣತರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರನ್ನೂ ಒಳಗೊಳಿಸಿಕೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.</p>.<p>ಬೇಗ ನಡೆದರೆ ಅನುಕೂಲ:</p>.<p>‘ಈ ಬಾರಿಯಾದರೂ ನೇಮಕ ಪ್ರಕ್ರಿಯೆಯನ್ನು ಬೇಗ ಮುಗಿಸಿದರೆ ಅನುಕೂಲವಾಗುತ್ತದೆ. ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಕ್ಕೆ ಮುನ್ನ ಜನರ ಅಭಿಪ್ರಾಯಗಳನ್ನು ನಾವು ಮಂಡಿಸುವುದಕ್ಕೆ ಸಹಕಾರಿಯಾಗುತ್ತದೆ. ಇಲ್ಲದಿದ್ದರೆ ಹೆಸರಿಗಷ್ಟೆ ಅಧಿಕಾರಿಗಳು, ಸದಸ್ಯರು ಎಂದುಕೊಳ್ಳಬೇಕಾಗುತ್ತದೆ’ ಎಂದು ಬಿಜೆಪಿ ಮುಖಂಡರೊಬ್ಬರು ಪ್ರತಿಕ್ರಿಯಿಸಿದರು.</p>.<p><strong>ಚರ್ಚಿಸಿ ನಿರ್ಧಾರ</strong></p>.<p><em> ದಸರಾ ಉಪ ಸಮಿತಿಗಳಿಗೆ ಅಧಿಕಾರೇತರ ಸದಸ್ಯರನ್ನು ನೇಮಕದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಂದಿನ ಸಭೆಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ.</em></p>.<p><strong>– ಡಾ.ಬಗಾದಿ ಗೌತಮ್, ಜಿಲ್ಲಾಧಿಕಾರಿ</strong></p>.<p><strong>ಸಚಿವರನ್ನು ಕೋರಿದ್ದೇನೆ</strong></p>.<p><em> ನಾಡಹಬ್ಬದಲ್ಲಿ ಎಲ್ಲರನ್ನೂ ಒಳಗೊಳಿಸಿಕೊಳ್ಳಲು ಬಿಜೆಪಿಯೊಂದಿಗೆ ಇತರ ಪಕ್ಷದವರನ್ನೂ ಸಮಿತಿಗಳಿಗೆ ನೇಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರನ್ನು ಕೋರಿದ್ದೇನೆ.</em></p>.<p><strong>– ಸಾ.ರಾ.ಮಹೇಶ್, ಜೆಡಿಎಸ್ ಶಾಸಕ</strong></p>.<p><strong>ಸೆಳೆಯಬಹುದು</strong></p>.<p><em> ದಸರಾದಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಈಗಿನಿಂದಲೇ ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಆಗ, ಪ್ರವಾಸಿಗರನ್ನು ಸೆಳೆಯಬಹುದು.</em></p>.<p><strong>–ಬಿ.ಎಸ್.ಪ್ರಶಾಂತ್, ಅಧ್ಯಕ್ಷ, ಮೈಸೂರು ಸಂಘ–ಸಂಸ್ಥೆಗಳ ಒಕ್ಕೂಟ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>