ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಉತ್ತರ ಕರ್ನಾಟಕದಲ್ಲಿ 2009ರಲ್ಲಿ ಪ್ರವಾಹ ಉಂಟಾದಾಗ ಬಿ.ಎಸ್. ಯಡಿಯೂರಪ್ಪ ಸರ್ಕಾರದಲ್ಲಿ 60 ಹಳ್ಳಿಗಳನ್ನು ಸ್ಥಳಾಂತರಿಸಲಾಗಿತ್ತು. ಮನೆಗಳನ್ನೂ ಕಟ್ಟಿಕೊಡಲಾಗಿತ್ತು. ಆದರೆ, ಪ್ರವಾಹ ಇಳಿಯುತ್ತಿದ್ದಂತೆಯೇ ಜನರು ಮತ್ತೆ ತಮ್ಮ ಊರುಗಳಿಗೇ ಮರಳಿದರು. ಹೀಗಾಗಿ, ರಾಜ್ಯದಾದ್ಯಂತ ಪ್ರವಾಹಬಾಧಿತ ಸ್ಥಳಗಳನ್ನು ಗುರುತಿಸಿ ಸುತ್ತಮುತ್ತಲಿನ ಎತ್ತರದ ಜಾಗದಲ್ಲಿ ಪುನರ್ವಸತಿ ಕೇಂದ್ರ ಸ್ಥಾಪಿಸಿ, ಕೂಡಲೇ ಸ್ಥಳಾಂತರಕ್ಕೆ ಕ್ರಮ ವಹಿಸಲಾಗುತ್ತದೆ. ಇದಕ್ಕಾಗಿ ಸಮಗ್ರ ಸಮೀಕ್ಷೆ ನಡೆಸುವಂತೆ ಸೂಚಿಸಿದ್ದೇನೆ’ ಎಂದು ಹೇಳಿದರು.