ನೇತ್ರರಾಜು ಎಂದೇ ಪ್ರಸಿದ್ಧರಾಗಿದ್ದ ನಾಗೇಂದ್ರ ಕುಮಾರ್ ಜೈನ್, ಹಲವು ಕನ್ನಡ ಮತ್ತು ಆಂಗ್ಲ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಅವರ ಛಾಯಾಚಿತ್ರಗಳು ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದ್ದವು. 2014ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದರು.