ಮನುಷ್ಯರು ಮಾತ್ರವಲ್ಲ, ಪ್ರಾಣಿ, ಪಕ್ಷಿಗಳು, ನೆಲ, ಜಲ ಸೇರಿದಂತೆ ಎಲ್ಲವನ್ನು ಸಂರಕ್ಷಿಸುವ ಹೊಣೆಗಾರಿಕೆ ಪ್ರಭುತ್ವದ ಮೇಲಿದೆ. ಹಾಗಾಗಿ, ಕೋವಿಡ್ಪೀಡಿತರ ಸಾವಿನ ವಿರುದ್ಧ ಪ್ರಧಾನಮಂತ್ರಿ, ಮುಖ್ಯಮಂತ್ರಿ ಹಾಗೂ ಅಧಿಕಾರಿಗಳನ್ನು ಪಾರ್ಟಿ ಮಾಡಿ ದಾವೆ ಹೂಡಲಾಗುವುದು ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.