‘ಶಾಸಕರೊಬ್ಬರು ಸರ್ಕಾರಿ ಜಾಗದಲ್ಲಿ ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ ಎಂದು ರೋಹಿಣಿ ಸಿಂಧೂರಿ ಆರೋಪಿಸಿದ್ದರು. ಆದರೆ, ಅದು ಆಧಾರರಹಿತ ಎಂಬುದು ಸಾಬೀತಾಗಿದೆ. ಈ ಹಿಂದೆ ರೋಹಿಣಿ ಅವರು ಮುಜರಾಯಿ ಇಲಾಖೆ ಆಯುಕ್ತರಾಗಿದ್ದ ಸಂದರ್ಭದಲ್ಲಿ, ತಿರುಪತಿಯಲ್ಲಿ ಮೈಸೂರು ಮಹಾರಾಜರ ಕಾಲದ ಜಾಗವನ್ನು ಆಂಧ್ರ ಸರ್ಕಾರಕ್ಕೆ ಹಾಗೂ ಗುತ್ತಿಗೆದಾರರಿಗೆ ಹಸ್ತಾಂತರ ಮಾಡಿದ್ದಾರೆ ಎಂಬ ಆರೋಪವಿದೆ. ಈ ಬಗ್ಗೆಯೂ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.