‘ಜೂನ್ 20ರಂದು ಸಂಜೆ 4.50ಕ್ಕೆ ವಿಮಾನನಿಲ್ದಾಣಕ್ಕೆ ಬರಲಿದ್ದಾರೆ. ಅಲ್ಲಿಂದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ‘ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ’ ಸಮಾರಂಭದಲ್ಲಿ ಭಾಗವಹಿಸಿ, ಭಾಷಣ ಮಾಡಲಿದ್ದಾರೆ. ಆಯುಷ್ನಲ್ಲಿ ಕೇಂದ್ರದ ಅನುದಾನ ₹ 150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಉತ್ಕೃಷ್ಟ ಕೇಂದ್ರವನ್ನು ಅದೇ ವೇದಿಕೆಯಲ್ಲಿ ಉದ್ಘಾಟಿಸಲಿದ್ದಾರೆ’ ಎಂದು ಇಲ್ಲಿ ಪತ್ರಕರ್ತರಿಗೆ ಶುಕ್ರವಾರ ಮಾಹಿತಿ ನೀಡಿದರು.