<p><strong>ಮೈಸೂರು: </strong>ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಯೋಗ ದಿನಾಚರಣೆಗಾಗಿ ಸ್ಥಳ ನಿರ್ಧಾರ ಇನ್ನೂ ಆಗಿಲ್ಲ. ರೇಸ್ಕೋರ್ಸ್, ಅರಮನೆ ಆವರಣ ಸೇರಿದಂತೆ ನಗರದಲ್ಲಿರುವ ಹಲವು ಸ್ಥಳಗಳನ್ನು ಪರಿಶೀಲಿಸಲಾಗುತ್ತಿದೆ. ಕೇಂದ್ರ ತಂಡವು ಸದ್ಯದಲ್ಲೇ ಅಂತಿಮಗೊಳಿಸಲಿದೆ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/pm-narendra-modi-to-celebrate-international-yoga-day-in-mysuru-938561.html" itemprop="url">ಅಂತರರಾಷ್ಟ್ರೀಯ ಯೋಗ ದಿನ: ಮೈಸೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮೋದಿ </a></p>.<p>ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ಪಕ್ಷದವರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸಲಾಗುವುದು. ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಈ ಸಮಿತಿಯಲ್ಲಿ ವಿವಿಧ ಯೋಗತರಬೇತಿ ಕೇಂದ್ರಗಳ ಮುಖ್ಯಸ್ಥರೂ ಸದಸ್ಯರಾಗಿರುತ್ತಾರೆ. ಒಟ್ಟಾರೆ, ಕಾರ್ಯಕ್ರಮದ ಕುರಿತು ಇಲ್ಲಿ ನಿರ್ಧರಿಸಲಾಗುವುದು ಎಂದರು.</p>.<p>ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಮೇ 30ರಂದು ನಗರಕ್ಕೆ ಬರಲಿದ್ದಾರೆ. ಇದಕ್ಕೂ ಮುನ್ನ ಮೇ 28 ಇಲ್ಲವೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಬಂದು ಈ ಸಂಬಂಧ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಯೋಗ ದಿನಾಚರಣೆಯಲ್ಲಿ ಕೇವಲ ಮೈಸೂರಿಗರಿಗಷ್ಟೇ ಅವಕಾಶ ನೀಡದೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಯೋಗಪಟುಗಳು ಭಾಗವಹಿಸಲೂ ಅವಕಾಶ ಕಲ್ಪಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.</p>.<p><a href="https://www.prajavani.net/karnataka-news/karnataka-mlc-election-bjp-announced-candidate-list-no-ticekt-for-by-vijayendra-karnataka-politics-939278.html" itemprop="url">ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ವಿಜಯೇಂದ್ರಗೆ ನಿರಾಸೆ </a></p>.<p>ಪ್ರಧಾನಮಂತ್ರಿ ಮೈಸೂರಿಗೆ ಭೇಟಿ ನೀಡುವ ವಿಚಾರವನ್ನು ಕೇವಲ ಮುಂಬರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ಮಾತ್ರ ನೋಡಬಾರದು. ಮೈಸೂರಿನ ಪ್ರವಾಸೋದ್ಯಮದ ಅಭಿವೃದ್ಧಿಯನ್ನೂ ಗಮನಿಸಬೇಕು. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.</p>.<p><strong>ಮುಖ್ಯಮಂತ್ರಿ ಗಮನಕ್ಕೆ ರಸ್ತೆಗುಂಡಿಗಳು:</strong>ಮೈಸೂರು ನಗರದಲ್ಲಿರುವ ರಸ್ತೆಗುಂಡಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ಅವರು ಇಲ್ಲಿಗೆ ಬಂದು ಸಭೆ ನಡೆಸುವ ವೇಳೆ ಮತ್ತೊಮ್ಮೆ ಪ್ರಸ್ತಾಪಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p><a href="https://www.prajavani.net/india-news/free-inclusive-indo-pacific-region-a-shared-goal-of-quad-modi-in-tokyo-939280.html" itemprop="url">ಒಳಗೊಳ್ಳುವಿಕೆ, ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸೃಷ್ಟಿಯು ಕ್ವಾಡ್ನ ಗುರಿ: ಮೋದಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಯೋಗ ದಿನಾಚರಣೆಗಾಗಿ ಸ್ಥಳ ನಿರ್ಧಾರ ಇನ್ನೂ ಆಗಿಲ್ಲ. ರೇಸ್ಕೋರ್ಸ್, ಅರಮನೆ ಆವರಣ ಸೇರಿದಂತೆ ನಗರದಲ್ಲಿರುವ ಹಲವು ಸ್ಥಳಗಳನ್ನು ಪರಿಶೀಲಿಸಲಾಗುತ್ತಿದೆ. ಕೇಂದ್ರ ತಂಡವು ಸದ್ಯದಲ್ಲೇ ಅಂತಿಮಗೊಳಿಸಲಿದೆ ಎಂದು ಅವರು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/pm-narendra-modi-to-celebrate-international-yoga-day-in-mysuru-938561.html" itemprop="url">ಅಂತರರಾಷ್ಟ್ರೀಯ ಯೋಗ ದಿನ: ಮೈಸೂರಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಮೋದಿ </a></p>.<p>ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಎಲ್ಲ ಪಕ್ಷದವರನ್ನೂ ಒಳಗೊಂಡ ಸಮಿತಿಯೊಂದನ್ನು ರಚಿಸಲಾಗುವುದು. ಶಾಸಕರು, ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಈ ಸಮಿತಿಯಲ್ಲಿ ವಿವಿಧ ಯೋಗತರಬೇತಿ ಕೇಂದ್ರಗಳ ಮುಖ್ಯಸ್ಥರೂ ಸದಸ್ಯರಾಗಿರುತ್ತಾರೆ. ಒಟ್ಟಾರೆ, ಕಾರ್ಯಕ್ರಮದ ಕುರಿತು ಇಲ್ಲಿ ನಿರ್ಧರಿಸಲಾಗುವುದು ಎಂದರು.</p>.<p>ಇದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರು ಮೇ 30ರಂದು ನಗರಕ್ಕೆ ಬರಲಿದ್ದಾರೆ. ಇದಕ್ಕೂ ಮುನ್ನ ಮೇ 28 ಇಲ್ಲವೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೈಸೂರಿಗೆ ಬಂದು ಈ ಸಂಬಂಧ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.</p>.<p>ಯೋಗ ದಿನಾಚರಣೆಯಲ್ಲಿ ಕೇವಲ ಮೈಸೂರಿಗರಿಗಷ್ಟೇ ಅವಕಾಶ ನೀಡದೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಯೋಗಪಟುಗಳು ಭಾಗವಹಿಸಲೂ ಅವಕಾಶ ಕಲ್ಪಿಸುವ ಚಿಂತನೆ ನಡೆದಿದೆ ಎಂದು ಹೇಳಿದರು.</p>.<p><a href="https://www.prajavani.net/karnataka-news/karnataka-mlc-election-bjp-announced-candidate-list-no-ticekt-for-by-vijayendra-karnataka-politics-939278.html" itemprop="url">ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ವಿಜಯೇಂದ್ರಗೆ ನಿರಾಸೆ </a></p>.<p>ಪ್ರಧಾನಮಂತ್ರಿ ಮೈಸೂರಿಗೆ ಭೇಟಿ ನೀಡುವ ವಿಚಾರವನ್ನು ಕೇವಲ ಮುಂಬರುವ ವಿಧಾನಸಭಾ ಚುನಾವಣಾ ದೃಷ್ಟಿಯಿಂದ ಮಾತ್ರ ನೋಡಬಾರದು. ಮೈಸೂರಿನ ಪ್ರವಾಸೋದ್ಯಮದ ಅಭಿವೃದ್ಧಿಯನ್ನೂ ಗಮನಿಸಬೇಕು. ಈ ಹಿನ್ನೆಲೆಯಲ್ಲಿ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನಡೆಸಲಾಗುವುದು ಎಂದು ಹೇಳಿದರು.</p>.<p><strong>ಮುಖ್ಯಮಂತ್ರಿ ಗಮನಕ್ಕೆ ರಸ್ತೆಗುಂಡಿಗಳು:</strong>ಮೈಸೂರು ನಗರದಲ್ಲಿರುವ ರಸ್ತೆಗುಂಡಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ಅವರು ಇಲ್ಲಿಗೆ ಬಂದು ಸಭೆ ನಡೆಸುವ ವೇಳೆ ಮತ್ತೊಮ್ಮೆ ಪ್ರಸ್ತಾಪಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p><a href="https://www.prajavani.net/india-news/free-inclusive-indo-pacific-region-a-shared-goal-of-quad-modi-in-tokyo-939280.html" itemprop="url">ಒಳಗೊಳ್ಳುವಿಕೆ, ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸೃಷ್ಟಿಯು ಕ್ವಾಡ್ನ ಗುರಿ: ಮೋದಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>