‘ಭದ್ರತಾ ಹಿತದೃಷ್ಟಿಯಿಂದ ಈ ಕ್ರಮ ವಹಿಸಲಾಗಿದೆ. ನಿಷೇಧಿತ ಅವಧಿಯಲ್ಲಿ ಮೆಟ್ಟಿಲುಗಳ ಮಾರ್ಗದಲ್ಲಿ ಬರುವುದಕ್ಕೂ ಭಕ್ತರು ಹಾಗೂ ಸಾರ್ವಜನಿಕರಿಗೆ ನಿರ್ಬಂಧವಿದೆ. ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಇತರ ಸಾರ್ವಜನಿಕ ಹಾಗೂ ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಚಾಮುಂಡಿಬೆಟ್ಟದ ಗ್ರಾಮಸ್ಥರು ಅನಿವಾರ್ಯ ಪ್ರಸಂಗವಿದ್ದಲ್ಲಿ ವಾಸಸ್ಥಳದ ಗುರುತಿನ ಚೀಟಿ ಹೊಂದಿರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಶಿಷ್ಟಾಚಾರ ವ್ಯವಸ್ಥೆ ಹೊಂದಿರುವ ಗಣ್ಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳ ವಾಹನಗಳಿಗಷ್ಟೆ ಪ್ರವೇಶವಿರುತ್ತದೆ. ಖಾಸಗಿ ವಾಹನಗಳ ಪ್ರವೇಶವನ್ನು ಕಡ್ಡಾಯವಾಶಗಿ ನಿಷೇಧಿಸಲಾಗಿದೆ’ ಎಂದು ಪ್ರಕಟಣೆ ನೀಡಿದ್ದಾರೆ.