<p><strong>ಮೈಸೂರು: </strong>ಇಲ್ಲಿನ ದೇವರಾಜ ಠಾಣೆ ಕಾನ್ ಸ್ಟೆಬಲ್ ಪರ್ಸಪ್ಪ ಕೊನ್ನೂರು ( 29) ಇಲ್ಲಿನ ಜಲಪುರಿಯ ತಮ್ಮ ವಸತಿಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /><br />ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅವರು 2017ರ ಬ್ಯಾಚಿನಲ್ಲಿ ಕಾನ್ ಸ್ಟೆಬಲ್ ಆಗಿ ಆಯ್ಕೆಗೊಂಡು 2018 ರಿಂದಲೂ ಇಲ್ಲಿನ ದೇವರಾಜ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು ಮಕ್ಕಳಿರಲಿಲ್ಲ. ಪತ್ನಿ ವಾಯುವಿಹಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದಾರೆ.</p>.<p>ಸಾವಿನ ಕುರಿತು ತನಿಖೆಯ ಅಗತ್ಯ ಇಲ್ಲ. ತನ್ನ ಪಾಲಿನ ಆಸ್ತಿಯನ್ನೆಲ್ಲ ಅಣ್ಣನ ಮಕ್ಕಳಿಗೆ ನೀಡಬೇಕು ಎಂದು ಪತ್ರ ಬರೆದಿಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಓದಿ...<a href="https://www.prajavani.net/district/mysore/housewife-commits-suicide-after-consuming-alcohol-at-mysore-940362.html" target="_blank">ಮೈಸೂರು:ಮದ್ಯ ಸೇವಿಸಿನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ</a></strong></p>.<p><strong>ಪ್ರತ್ಯೇಕ ಘಟನೆ: ನೀರಿನಲ್ಲಿ ಮುಳುಗಿ ಇಬ್ಬರು ಸಾವು<br />ಮೈಸೂರು: </strong>ಹುಣಸೂರು ನಗರದ ಸಂತಜೋಸೆಫ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಹರ್ಷ (13) ತನ್ನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.<br /><br />ಮತ್ತೊಂದು ಪ್ರಕರಣದಲ್ಲಿ ಮುತ್ತುರಾಯನಹೊಸಹಳ್ಳಿ ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಗೃಹಿಣಿ ರುದ್ರಮ್ಮ (53) ಕಾಲುಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.<br /><br />ಎರಡು ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ದೇವರಾಜ ಠಾಣೆ ಕಾನ್ ಸ್ಟೆಬಲ್ ಪರ್ಸಪ್ಪ ಕೊನ್ನೂರು ( 29) ಇಲ್ಲಿನ ಜಲಪುರಿಯ ತಮ್ಮ ವಸತಿಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /><br />ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಅವರು 2017ರ ಬ್ಯಾಚಿನಲ್ಲಿ ಕಾನ್ ಸ್ಟೆಬಲ್ ಆಗಿ ಆಯ್ಕೆಗೊಂಡು 2018 ರಿಂದಲೂ ಇಲ್ಲಿನ ದೇವರಾಜ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು ಮಕ್ಕಳಿರಲಿಲ್ಲ. ಪತ್ನಿ ವಾಯುವಿಹಾರಕ್ಕೆ ಹೋಗಿದ್ದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದಾರೆ.</p>.<p>ಸಾವಿನ ಕುರಿತು ತನಿಖೆಯ ಅಗತ್ಯ ಇಲ್ಲ. ತನ್ನ ಪಾಲಿನ ಆಸ್ತಿಯನ್ನೆಲ್ಲ ಅಣ್ಣನ ಮಕ್ಕಳಿಗೆ ನೀಡಬೇಕು ಎಂದು ಪತ್ರ ಬರೆದಿಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನಜರ್ ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><strong>ಓದಿ...<a href="https://www.prajavani.net/district/mysore/housewife-commits-suicide-after-consuming-alcohol-at-mysore-940362.html" target="_blank">ಮೈಸೂರು:ಮದ್ಯ ಸೇವಿಸಿನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ</a></strong></p>.<p><strong>ಪ್ರತ್ಯೇಕ ಘಟನೆ: ನೀರಿನಲ್ಲಿ ಮುಳುಗಿ ಇಬ್ಬರು ಸಾವು<br />ಮೈಸೂರು: </strong>ಹುಣಸೂರು ನಗರದ ಸಂತಜೋಸೆಫ್ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಹರ್ಷ (13) ತನ್ನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ್ದಾನೆ.<br /><br />ಮತ್ತೊಂದು ಪ್ರಕರಣದಲ್ಲಿ ಮುತ್ತುರಾಯನಹೊಸಹಳ್ಳಿ ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಗೃಹಿಣಿ ರುದ್ರಮ್ಮ (53) ಕಾಲುಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.<br /><br />ಎರಡು ಪ್ರಕರಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>