ಮಂಜುನಾಥ್ ಕರ್ತವ್ಯ ನಿಮಿತ್ತ ಬುಧವಾರ ಬೆಳಿಗ್ಗೆ ಜಾರ್ಖಂಡ್ಗೆ ತೆರಳಿದ್ದು ತಮ್ಮ ಕುಟುಂಬದ ಸದಸ್ಯರ ರಕ್ಷಣೆಯ ಕುರಿತಂತೆ ಪಟ್ಟಣದ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ. ಪ್ರಕರಣದ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ಸಿಂಗ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಈ ಮೊದಲು ಜೂನ್ 7ರಂದು ಅಪಘಾತ ಬಗ್ಗೆ ದೂರು ದಾಖಲಾಗಿದ್ದು, ಆ ಸಂದರ್ಭದಲ್ಲಿ ದೂರುದಾರರು ಹಲ್ಲೆಯ ಬಗ್ಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಹಲ್ಲೆ ನಡೆದಿರುವ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮಾಹಿತಿ ನೀಡಿದರು.