<p><strong>ಮೈಸೂರು</strong>: ‘ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹುಸಿ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್– ಜೆಡಿಎಸ್ನಿಂದಾಗಿಯೇ ಬಿಜೆಪಿ ಅಧಿಕಾರ ಹಿಡಿದಿದೆ’ ಎಂದುಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.</p>.<p>‘ಎರಡೂ ಪಕ್ಷಗಳಿಗೆ ಜಾತ್ಯತೀತ ತತ್ವದ ಮೇಲೆ ನಂಬಿಕೆಯಿಲ್ಲ. ಅಲ್ಪಸಂಖ್ಯಾತರಿಗೆ ಉಪಮೇಯರ್ ಆಮಿಷ ತೋರಿ ಪೂರಕ ದಾಖಲೆಯನ್ನು ನೀಡದೆ ಜೆಡಿಎಸ್ ವಂಚಿಸಿದೆ’ ಎಂದು ಬುಧವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಪಕ್ಷಗಳ ವರಿಷ್ಠರು ಅಹಂಕಾರ ಮರೆತು ಒಂದಾಗಿದ್ದರೆ, ಪಾಲಿಕೆಯಲ್ಲಿ ಅಲ್ಪಸಂಖ್ಯಾತರಿಗೆ ಉತ್ತಮ ಸ್ಥಾನ ಸಿಗುತ್ತಿತ್ತು. ಅಧಿಕಾರ ತಪ್ಪಿಸುವ ಉದ್ದೇಶದಿಂದಲೇ ಮೈತ್ರಿ ನಡೆಸಿಲ್ಲ. ಜೆಡಿಎಸ್ ನಾಯಕರು ರೇಷ್ಮಾ ಬಾನು ಅವರಿಗೆ ಜಾತಿ ಪ್ರಮಾಣಪತ್ರ ಸಿದ್ಧ ಮಾಡಿಟ್ಟುಕೊಳ್ಳಲು ಹೇಳಲಾರದ ಅಜ್ಞಾನಿಗಳೇ’ ಎಂದು ಪ್ರಶ್ನಿಸಿದರು.</p>.<p>ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ ಮಾತನಾಡಿ, ‘ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ದೂರವಿಡುವ ಷಡ್ಯಂತ್ರ ನಡೆಸುತ್ತಿವೆ. ಆದ್ದರಿಂದ ಎಚ್ಚೆತ್ತುಕೊಳ್ಳಬೇಕು’ ಎಂದರು.</p>.<p>ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ರಫತ್ಖಾನ್, ಉಪಾಧ್ಯಕ್ಷ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಫಿವುಲ್ಲಾ, ಸದಸ್ಯ ಅಮ್ಜದ್ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಹುಸಿ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್– ಜೆಡಿಎಸ್ನಿಂದಾಗಿಯೇ ಬಿಜೆಪಿ ಅಧಿಕಾರ ಹಿಡಿದಿದೆ’ ಎಂದುಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.</p>.<p>‘ಎರಡೂ ಪಕ್ಷಗಳಿಗೆ ಜಾತ್ಯತೀತ ತತ್ವದ ಮೇಲೆ ನಂಬಿಕೆಯಿಲ್ಲ. ಅಲ್ಪಸಂಖ್ಯಾತರಿಗೆ ಉಪಮೇಯರ್ ಆಮಿಷ ತೋರಿ ಪೂರಕ ದಾಖಲೆಯನ್ನು ನೀಡದೆ ಜೆಡಿಎಸ್ ವಂಚಿಸಿದೆ’ ಎಂದು ಬುಧವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಪಕ್ಷಗಳ ವರಿಷ್ಠರು ಅಹಂಕಾರ ಮರೆತು ಒಂದಾಗಿದ್ದರೆ, ಪಾಲಿಕೆಯಲ್ಲಿ ಅಲ್ಪಸಂಖ್ಯಾತರಿಗೆ ಉತ್ತಮ ಸ್ಥಾನ ಸಿಗುತ್ತಿತ್ತು. ಅಧಿಕಾರ ತಪ್ಪಿಸುವ ಉದ್ದೇಶದಿಂದಲೇ ಮೈತ್ರಿ ನಡೆಸಿಲ್ಲ. ಜೆಡಿಎಸ್ ನಾಯಕರು ರೇಷ್ಮಾ ಬಾನು ಅವರಿಗೆ ಜಾತಿ ಪ್ರಮಾಣಪತ್ರ ಸಿದ್ಧ ಮಾಡಿಟ್ಟುಕೊಳ್ಳಲು ಹೇಳಲಾರದ ಅಜ್ಞಾನಿಗಳೇ’ ಎಂದು ಪ್ರಶ್ನಿಸಿದರು.</p>.<p>ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ ಮಾತನಾಡಿ, ‘ದಲಿತರು ಹಾಗೂ ಅಲ್ಪಸಂಖ್ಯಾತರನ್ನು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ದೂರವಿಡುವ ಷಡ್ಯಂತ್ರ ನಡೆಸುತ್ತಿವೆ. ಆದ್ದರಿಂದ ಎಚ್ಚೆತ್ತುಕೊಳ್ಳಬೇಕು’ ಎಂದರು.</p>.<p>ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ರಫತ್ಖಾನ್, ಉಪಾಧ್ಯಕ್ಷ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಫಿವುಲ್ಲಾ, ಸದಸ್ಯ ಅಮ್ಜದ್ಖಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>