<p><strong>ಮೈಸೂರು</strong>: ‘ಬೋಧನೆ-ಸಂಶೋಧನೆಗಳನ್ನು ಬಹುಶಿಸ್ತೀಯ ದೃಷ್ಟಿಕೋನದಿಂದ ಅರ್ಥೈಸುವ ಶಕ್ತಿಯನ್ನು ಅಧ್ಯಾಪಕರು ಬೆಳೆಸಿಕೊಳ್ಳಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಪೀಠದ ಸಂದರ್ಶಕ ಪ್ರಾಧ್ಯಾಪಕಿ ಪ್ರೊ.ಆರ್.ಇಂದಿರಾ ಸಲಹೆ ನೀಡಿದರು.</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ 45 ದಿನಗಳವರೆಗೆ ನಡೆಸಿದ ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>‘ಪ್ರಸ್ತುತ ಶೈಕ್ಷಣಿಕ ಪ್ರಪಂಚದ ನೀರೀಕ್ಷೆಗಳು ಹೆಚ್ಚು ವಿಸ್ತಾರವಾಗುತ್ತಿವೆ. ಆದ್ದರಿಂದ ಅಧ್ಯಾಪಕರು ನಿರಂತರ ಹುಡುಕಾಟದಲ್ಲಿ ತೊಡಗಬೇಕು’ ಎಂದರು.</p>.<p>‘ಇಂದು ಜ್ಞಾನದ ಮೂಲಗಳು ಹೆಚ್ಚಿವೆ. ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವಕಾಶಗಳೂ ಇವೆ. ತರಗತಿಗಳಲ್ಲಿ ಪಡೆದ ಜ್ಞಾನವನ್ನು ಬದುಕಿನ ವಾಸ್ತವಗಳಿಗೆ ಅನ್ವಯಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಜ್ಞಾನಾರ್ಜನೆಯನ್ನು ತರಗತಿಗಳಿಗೆ ಮಾತ್ರ ಸೀಮಿತಗೊಳಿಸದೆ ಹೊರ ಪ್ರಪಂಚದ ಅರಿವು ಹಾಗೂ ಅನುಭವಗಳನ್ನು ಅಧ್ಯಾಪಕರು ನೀಡುವಂತಾಗಬೇಕು’ ಎಂದು ಆಶಿಸಿದರು.</p>.<p>‘ಮುಕ್ತ ಭಂಡಾರ’ ಅಧ್ಯಯನ ಪುಸ್ತಕವನ್ನು ಕೆಎಸ್ಒಯು ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಬಿಡುಗಡೆ ಮಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಕುಲಸಚಿವ ಡಾ.ಎ.ಖಾದರ್ ಪಾಷ, ‘ಯುಜಿಸಿ, ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳು ತಾವು ತೆಗೆದುಕೊಳ್ಳುವ ಐಚ್ಛಿಕ ವಿಷಯದ ಜೊತೆಗೆ ಮೂಲಭೂತ ಅಂಶಗಳನ್ನು ತಿಳಿದಿರಬೇಕು. ಆಗ, ಯಶಸ್ಸು ಗಳಿಸಬಹುದು’ ಎಂದರು.</p>.<p>ಶೈಕ್ಷಣಿಕ ಡೀನ್ ಪ್ರೊ.ಕಾಂಬ್ಳೆ ಅಶೋಕ್, ಅಧ್ಯಯನ ಡೀನ್ ಪ್ರೊ.ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಬಿ.ಗಣೇಶ್ ಕೆ.ಜಿ. ಕೊಪ್ಪಲ್, ಸಿದ್ದೇಶ್ ಹೊನ್ನೂರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಬೋಧನೆ-ಸಂಶೋಧನೆಗಳನ್ನು ಬಹುಶಿಸ್ತೀಯ ದೃಷ್ಟಿಕೋನದಿಂದ ಅರ್ಥೈಸುವ ಶಕ್ತಿಯನ್ನು ಅಧ್ಯಾಪಕರು ಬೆಳೆಸಿಕೊಳ್ಳಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಪೀಠದ ಸಂದರ್ಶಕ ಪ್ರಾಧ್ಯಾಪಕಿ ಪ್ರೊ.ಆರ್.ಇಂದಿರಾ ಸಲಹೆ ನೀಡಿದರು.</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ 45 ದಿನಗಳವರೆಗೆ ನಡೆಸಿದ ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸೋಮವಾರ ಅವರು ಮಾತನಾಡಿದರು.</p>.<p>‘ಪ್ರಸ್ತುತ ಶೈಕ್ಷಣಿಕ ಪ್ರಪಂಚದ ನೀರೀಕ್ಷೆಗಳು ಹೆಚ್ಚು ವಿಸ್ತಾರವಾಗುತ್ತಿವೆ. ಆದ್ದರಿಂದ ಅಧ್ಯಾಪಕರು ನಿರಂತರ ಹುಡುಕಾಟದಲ್ಲಿ ತೊಡಗಬೇಕು’ ಎಂದರು.</p>.<p>‘ಇಂದು ಜ್ಞಾನದ ಮೂಲಗಳು ಹೆಚ್ಚಿವೆ. ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗವಕಾಶಗಳೂ ಇವೆ. ತರಗತಿಗಳಲ್ಲಿ ಪಡೆದ ಜ್ಞಾನವನ್ನು ಬದುಕಿನ ವಾಸ್ತವಗಳಿಗೆ ಅನ್ವಯಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬೇಕು. ಜ್ಞಾನಾರ್ಜನೆಯನ್ನು ತರಗತಿಗಳಿಗೆ ಮಾತ್ರ ಸೀಮಿತಗೊಳಿಸದೆ ಹೊರ ಪ್ರಪಂಚದ ಅರಿವು ಹಾಗೂ ಅನುಭವಗಳನ್ನು ಅಧ್ಯಾಪಕರು ನೀಡುವಂತಾಗಬೇಕು’ ಎಂದು ಆಶಿಸಿದರು.</p>.<p>‘ಮುಕ್ತ ಭಂಡಾರ’ ಅಧ್ಯಯನ ಪುಸ್ತಕವನ್ನು ಕೆಎಸ್ಒಯು ಪರೀಕ್ಷಾಂಗ ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ ಬಿಡುಗಡೆ ಮಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಭಾರ ಕುಲಸಚಿವ ಡಾ.ಎ.ಖಾದರ್ ಪಾಷ, ‘ಯುಜಿಸಿ, ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳು ತಾವು ತೆಗೆದುಕೊಳ್ಳುವ ಐಚ್ಛಿಕ ವಿಷಯದ ಜೊತೆಗೆ ಮೂಲಭೂತ ಅಂಶಗಳನ್ನು ತಿಳಿದಿರಬೇಕು. ಆಗ, ಯಶಸ್ಸು ಗಳಿಸಬಹುದು’ ಎಂದರು.</p>.<p>ಶೈಕ್ಷಣಿಕ ಡೀನ್ ಪ್ರೊ.ಕಾಂಬ್ಳೆ ಅಶೋಕ್, ಅಧ್ಯಯನ ಡೀನ್ ಪ್ರೊ.ರಾಮನಾಥಂ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಬಿ.ಗಣೇಶ್ ಕೆ.ಜಿ. ಕೊಪ್ಪಲ್, ಸಿದ್ದೇಶ್ ಹೊನ್ನೂರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>