ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಆಘಾತ: ಬಾಲಕ ಬಲಿ

Last Updated 18 ಜೂನ್ 2020, 16:39 IST
ಅಕ್ಷರ ಗಾತ್ರ

ಮೈಸೂರು: ನಗರದ ಇಟ್ಟಿಗೆಗೂಡು ಬಡಾವಣೆಯಲ್ಲಿ ಆಟವಾಡುವಾಗ ಬೀದಿ ದೀಪದ ಕೆಳಗೆ ಬಿದ್ದ ಚೆಂಡನ್ನು ಎತ್ತಿಕೊಳ್ಳಲು ಹೋದ ಬಾಲಕನಿಗೆ, ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಿನ್ನ–ಬೆಳ್ಳಿಯ ಕೆಲಸ ಮಾಡುವ ಸುಂದರ್ ಎಂಬುವರ ಪುತ್ರ ಕೌಶಿಕ್ (14) ಮೃತ ಬಾಲಕ.

ಬುಧವಾರ ರಾತ್ರಿ ಮಳೆ ಬಿಟ್ಟ ಬಳಿಕ ಆಟವಾಡುವಾಗ ಈ ಘಟನೆ ನಡೆದಿದೆ ಎಂದು ನಜರಬಾದ್ ಪೊಲೀಸರು ಮಾಹಿತಿ ನೀಡಿದ್ದಾರೆ.

ಗೃಹಿಣಿ ಆತ್ಮಹತ್ಯೆ

ಪ್ರಿಯಕರನೊಂದಿಗಿನ ಮನಸ್ತಾಪದಿಂದ ಗೃಹಿಣಿಯೊಬ್ಬರು ನಗರದ ಟಿ.ಕೆ.ಬಡಾವಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶೀಲಾ (35) ಮೃತ ಗೃಹಿಣಿ. ಇವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ವೆಂಕಟೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ ಎಂಬುದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT