ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಬುಧವಾರ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿ, ‘ಗೋಹತ್ಯೆ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಬಕ್ರೀದ್ ಅವಧಿಯಲ್ಲಿ ಗೋಹತ್ಯೆ ತಡೆಯುವಂತೆ ಎಲ್ಲ ಜಿಲ್ಲೆಗಳ ಎಸ್ಪಿಗಳಿಗೆ ಸೂಚನೆ ನೀಡಿದ್ದೆವು. ಚೆಕ್ಪೋಸ್ಟ್ಗಳಲ್ಲಿ ಪೊಲೀಸರ ಜತೆ, ಇಲಾಖೆಯ ಪಶು ವೈದ್ಯರನ್ನೂ ನಿಯೋಜಿಸಿದ್ದೆವು. ಇದರಿಂದ ಸಾವಿರಾರು ಹಸುಗಳ ರಕ್ಷಣೆ ಆಗಿದೆ. ಗೋಮಾತೆ ಕಸಾಯಿಖಾನೆಗೆ ಸೇರಬಾರದು ಎಂಬುದೇ ನಮ್ಮ ಪ್ರಮುಖ ಉದ್ದೇಶ’ ಎಂದರು.