<p><strong>ಮೈಸೂರು:</strong> ‘ಆಂಗ್ಲ ಭಾಷಾ ಸಾಮ್ರಾಜ್ಯದ ಬೆಳವಣಿಗೆಯ ಭರಾಟೆಯಲ್ಲಿ ಕನ್ನಡ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ’ ಎಂದು ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕರು ಹೇಳಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಗುರುವಾರ ಮುಸ್ಸಂಜೆ ಆರಂಭಗೊಂಡ ಎರಡು ದಿನದ ಅಂತರರಾಷ್ಟ್ರೀಯ ಪ್ರಾಕೃತ ಸಮಾವೇಶ–2019ರಲ್ಲಿ ಮಾತನಾಡಿದ ಸ್ವಾಮೀಜಿ, ‘ಕನ್ನಡದಲ್ಲಿ ಮಾತನಾಡುವಾಗ ಆಂಗ್ಲ ಭಾಷೆ ಬಳಸುವುದನ್ನು ನಿಯಂತ್ರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಪ್ರಾಕೃತ 2300 ವರ್ಷಗಳ ಹಿಂದೆಯೇ ಶ್ರವಣಬೆಳಗೊಳಕ್ಕೆ ಬಂದಿದೆ. ಭಾರತೀಯ ಸಂಸ್ಕೃತಿ ಬಿಂಬಿಸುವ ಸಂಸ್ಕೃತ ಭಾಷೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮೆದುರಿಗಿದೆ. ಈ ಎರಡೂ ಭಾಷೆಗಳ ಜತೆ, ನೆಲದ ಭಾಷೆಯಾದ ಕನ್ನಡವನ್ನು ಕಾಪಾಡಬೇಕಿದೆ. ಇದಕ್ಕಾಗಿ ಫ್ರೆಂಚರು, ಜರ್ಮನ್ನರಂತೆ ತಾಯ್ನುಡಿಯ ಅಭಿಮಾನವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ’ ಎಂದು ಭಟ್ಟಾರಕರು ತಿಳಿಸಿದರು.</p>.<p>‘ಜ್ಞಾನದ ಬೆಳಕು ನಿರಂತರವಾದುದು. ಜ್ಞಾನ ಪ್ರಸಾರಕ್ಕೆ ಯಾವುದೇ ಅಡೆತಡೆಯಿಲ್ಲ. ಸೂರ್ಯ ಜಗತ್ತಿನಲ್ಲಿ ಹೇಗೆ ಅಸ್ತಂಗತನಾಗದೆ ಬೆಳಗುತ್ತಾನೆ, ಅದೇ ರೀತಿ ಜ್ಞಾನಕ್ಕೂ ಅಸ್ತಂಗತ ಎಂಬುದಿಲ್ಲ. ಜ್ಞಾನೋಪಾಸನೆಗೆ ಭೇದ–ಭಾವವಿಲ್ಲ. ಪ್ರತಿಯೊಬ್ಬರೂ ಜ್ಞಾನೋಪಾಸಕರಾಗುವ ಜತೆಯಲ್ಲೇ ಸತ್ಯದ ಸಂಶೋಧನೆ ಅರಿಯಲು ಮುಂದಾಗಬೇಕು’ ಎಂಬ ಕಿವಿಮಾತುಗಳನ್ನು ಹೇಳಿದರು.</p>.<p>‘ಸರ್ವ ಜನಾಂಗದ ಜತೆ ಆತ್ಮೀಯ ಒಡನಾಟ, ಸಂಬಂಧ ಹೊಂದಿರುವವರು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕರು. ಶ್ರೀಗಳ ಪೀಠಾರೋಹಣದ ಸುವರ್ಣ ಸಮಾರಂಭದಲ್ಲಿ ಭಾಗಿಯಾಗಿರುವುದು ಸಂತಸ ಕೊಟ್ಟಿದೆ’ ಎಂದು ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.</p>.<p>‘ಸಹಿಷ್ಣುತೆ, ಅಹಿಂಸೆಯನ್ನು ಜಗತ್ತಿಗೆ ಬೋಧಿಸಿದ್ದು ಜೈನ ಧರ್ಮ. ಈ ಧರ್ಮದ ಸಾಹಿತ್ಯ ಪ್ರಾಕೃತ ಭಾಷೆಯಲ್ಲಿದೆ. ದವಳ ಗ್ರಂಥಗಳನ್ನು ಕನ್ನಡಕ್ಕೆ ಅನುವಾದ ಮಾಡಿದ ತಪಸ್ವಿ ಭಟ್ಟಾರಕರು. ಇದನ್ನು ಸುವರ್ಣಾಕ್ಷರಗಳಲ್ಲಿ ದಾಖಲಿಸಬೇಕು’ ಎಂದು ಹೇಳಿದರು.</p>.<p>‘ಕನ್ನಡ ಸಾಹಿತ್ಯದ ಮೇಲೆ ಪ್ರಾಕೃತ ವಿಶೇಷ ಪ್ರಭಾವ ಬೀರಿದೆ. ಇದನ್ನು ಜನ ಭಾಷೆಯನ್ನಾಗಿಸುವ ದೊಡ್ಡ ಸೇವಾ ಕಾರ್ಯವನ್ನು ಚಾರುಕೀರ್ತಿ ಭಟ್ಟಾರಕರು ಕೈಗೊಂಡಿದ್ದಾರೆ. ಹಿಡಿದ ಕೆಲಸ ಪೂರೈಸುವ ತಪಸ್ವಿ ಅವರು’ ಎಂದು ಸುತ್ತೂರು ಸ್ವಾಮೀಜಿ ಪ್ರಶಂಸಿಸಿದರು.</p>.<p>ಕನಕಗಿರಿಯ ಭುವನಕೀರ್ತಿ ಭಟ್ಟಾರಕರು, ಕುಲಸಚಿವ ಪ್ರೊ.ಆರ್.ಶಿವಪ್ಪ, ಡಾ.ಜಯಕುಮಾರ ಉಪಾಧ್ಯೆ ಉಪಸ್ಥಿತರಿದ್ದರು.</p>.<p>ಪದ್ಮಶ್ರೀ ಪುರಸ್ಕೃತ ರಮಾಕಾಂತ್ ಶುಕ್ಲಾ ಚಾರುಕೀರ್ತಿ ಭಟ್ಟಾರಕರಿಗೆ ಪದ್ಯಾಂಜಲಿ ಅರ್ಪಿಸಿದರು. ಡಾ.ಹಂ.ಪ.ನಾಗರಾಜಯ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ನೀಲಗಿರಿ ಎಂ.ತಳವಾರ ಸ್ವಾಗತಿಸಿದರು. ಪ್ರೊ.ಸಿ.ನಾಗಣ್ಣ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಆಂಗ್ಲ ಭಾಷಾ ಸಾಮ್ರಾಜ್ಯದ ಬೆಳವಣಿಗೆಯ ಭರಾಟೆಯಲ್ಲಿ ಕನ್ನಡ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ’ ಎಂದು ಶ್ರವಣಬೆಳಗೊಳ ಜೈನಮಠದ ಚಾರುಕೀರ್ತಿ ಭಟ್ಟಾರಕರು ಹೇಳಿದರು.</p>.<p>ಮೈಸೂರು ವಿಶ್ವವಿದ್ಯಾಲಯದ ಸೆನೆಟ್ ಸಭಾಂಗಣದಲ್ಲಿ ಗುರುವಾರ ಮುಸ್ಸಂಜೆ ಆರಂಭಗೊಂಡ ಎರಡು ದಿನದ ಅಂತರರಾಷ್ಟ್ರೀಯ ಪ್ರಾಕೃತ ಸಮಾವೇಶ–2019ರಲ್ಲಿ ಮಾತನಾಡಿದ ಸ್ವಾಮೀಜಿ, ‘ಕನ್ನಡದಲ್ಲಿ ಮಾತನಾಡುವಾಗ ಆಂಗ್ಲ ಭಾಷೆ ಬಳಸುವುದನ್ನು ನಿಯಂತ್ರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಪ್ರಾಕೃತ 2300 ವರ್ಷಗಳ ಹಿಂದೆಯೇ ಶ್ರವಣಬೆಳಗೊಳಕ್ಕೆ ಬಂದಿದೆ. ಭಾರತೀಯ ಸಂಸ್ಕೃತಿ ಬಿಂಬಿಸುವ ಸಂಸ್ಕೃತ ಭಾಷೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮೆದುರಿಗಿದೆ. ಈ ಎರಡೂ ಭಾಷೆಗಳ ಜತೆ, ನೆಲದ ಭಾಷೆಯಾದ ಕನ್ನಡವನ್ನು ಕಾಪಾಡಬೇಕಿದೆ. ಇದಕ್ಕಾಗಿ ಫ್ರೆಂಚರು, ಜರ್ಮನ್ನರಂತೆ ತಾಯ್ನುಡಿಯ ಅಭಿಮಾನವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ’ ಎಂದು ಭಟ್ಟಾರಕರು ತಿಳಿಸಿದರು.</p>.<p>‘ಜ್ಞಾನದ ಬೆಳಕು ನಿರಂತರವಾದುದು. ಜ್ಞಾನ ಪ್ರಸಾರಕ್ಕೆ ಯಾವುದೇ ಅಡೆತಡೆಯಿಲ್ಲ. ಸೂರ್ಯ ಜಗತ್ತಿನಲ್ಲಿ ಹೇಗೆ ಅಸ್ತಂಗತನಾಗದೆ ಬೆಳಗುತ್ತಾನೆ, ಅದೇ ರೀತಿ ಜ್ಞಾನಕ್ಕೂ ಅಸ್ತಂಗತ ಎಂಬುದಿಲ್ಲ. ಜ್ಞಾನೋಪಾಸನೆಗೆ ಭೇದ–ಭಾವವಿಲ್ಲ. ಪ್ರತಿಯೊಬ್ಬರೂ ಜ್ಞಾನೋಪಾಸಕರಾಗುವ ಜತೆಯಲ್ಲೇ ಸತ್ಯದ ಸಂಶೋಧನೆ ಅರಿಯಲು ಮುಂದಾಗಬೇಕು’ ಎಂಬ ಕಿವಿಮಾತುಗಳನ್ನು ಹೇಳಿದರು.</p>.<p>‘ಸರ್ವ ಜನಾಂಗದ ಜತೆ ಆತ್ಮೀಯ ಒಡನಾಟ, ಸಂಬಂಧ ಹೊಂದಿರುವವರು ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕರು. ಶ್ರೀಗಳ ಪೀಠಾರೋಹಣದ ಸುವರ್ಣ ಸಮಾರಂಭದಲ್ಲಿ ಭಾಗಿಯಾಗಿರುವುದು ಸಂತಸ ಕೊಟ್ಟಿದೆ’ ಎಂದು ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.</p>.<p>‘ಸಹಿಷ್ಣುತೆ, ಅಹಿಂಸೆಯನ್ನು ಜಗತ್ತಿಗೆ ಬೋಧಿಸಿದ್ದು ಜೈನ ಧರ್ಮ. ಈ ಧರ್ಮದ ಸಾಹಿತ್ಯ ಪ್ರಾಕೃತ ಭಾಷೆಯಲ್ಲಿದೆ. ದವಳ ಗ್ರಂಥಗಳನ್ನು ಕನ್ನಡಕ್ಕೆ ಅನುವಾದ ಮಾಡಿದ ತಪಸ್ವಿ ಭಟ್ಟಾರಕರು. ಇದನ್ನು ಸುವರ್ಣಾಕ್ಷರಗಳಲ್ಲಿ ದಾಖಲಿಸಬೇಕು’ ಎಂದು ಹೇಳಿದರು.</p>.<p>‘ಕನ್ನಡ ಸಾಹಿತ್ಯದ ಮೇಲೆ ಪ್ರಾಕೃತ ವಿಶೇಷ ಪ್ರಭಾವ ಬೀರಿದೆ. ಇದನ್ನು ಜನ ಭಾಷೆಯನ್ನಾಗಿಸುವ ದೊಡ್ಡ ಸೇವಾ ಕಾರ್ಯವನ್ನು ಚಾರುಕೀರ್ತಿ ಭಟ್ಟಾರಕರು ಕೈಗೊಂಡಿದ್ದಾರೆ. ಹಿಡಿದ ಕೆಲಸ ಪೂರೈಸುವ ತಪಸ್ವಿ ಅವರು’ ಎಂದು ಸುತ್ತೂರು ಸ್ವಾಮೀಜಿ ಪ್ರಶಂಸಿಸಿದರು.</p>.<p>ಕನಕಗಿರಿಯ ಭುವನಕೀರ್ತಿ ಭಟ್ಟಾರಕರು, ಕುಲಸಚಿವ ಪ್ರೊ.ಆರ್.ಶಿವಪ್ಪ, ಡಾ.ಜಯಕುಮಾರ ಉಪಾಧ್ಯೆ ಉಪಸ್ಥಿತರಿದ್ದರು.</p>.<p>ಪದ್ಮಶ್ರೀ ಪುರಸ್ಕೃತ ರಮಾಕಾಂತ್ ಶುಕ್ಲಾ ಚಾರುಕೀರ್ತಿ ಭಟ್ಟಾರಕರಿಗೆ ಪದ್ಯಾಂಜಲಿ ಅರ್ಪಿಸಿದರು. ಡಾ.ಹಂ.ಪ.ನಾಗರಾಜಯ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ನೀಲಗಿರಿ ಎಂ.ತಳವಾರ ಸ್ವಾಗತಿಸಿದರು. ಪ್ರೊ.ಸಿ.ನಾಗಣ್ಣ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>