‘ಪ್ರಾಕೃತ 2300 ವರ್ಷಗಳ ಹಿಂದೆಯೇ ಶ್ರವಣಬೆಳಗೊಳಕ್ಕೆ ಬಂದಿದೆ. ಭಾರತೀಯ ಸಂಸ್ಕೃತಿ ಬಿಂಬಿಸುವ ಸಂಸ್ಕೃತ ಭಾಷೆಯನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮೆದುರಿಗಿದೆ. ಈ ಎರಡೂ ಭಾಷೆಗಳ ಜತೆ, ನೆಲದ ಭಾಷೆಯಾದ ಕನ್ನಡವನ್ನು ಕಾಪಾಡಬೇಕಿದೆ. ಇದಕ್ಕಾಗಿ ಫ್ರೆಂಚರು, ಜರ್ಮನ್ನರಂತೆ ತಾಯ್ನುಡಿಯ ಅಭಿಮಾನವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ’ ಎಂದು ಭಟ್ಟಾರಕರು ತಿಳಿಸಿದರು.