ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತನ್ವೀರ್‌ ಸೇಠ್‌ ತಾತನೂ ಹಿಂದೂ ಆಗಿದ್ದರು: ಪ್ರತಾಪ ಸಿಂಹ

Last Updated 6 ಫೆಬ್ರುವರಿ 2022, 9:05 IST
ಅಕ್ಷರ ಗಾತ್ರ

ಮೈಸೂರು: ‘ಇದು ನಮ್ಮ ತಾತನದ್ದೇ ದೇಶ. ತನ್ವೀರ್‌ ಸೇಠ್‌ ತಾತ ಕೂಡ ಹಿಂದೂ ಆಗಿದ್ದರು. ಅವರು ಮಕ್ಕಾ, ಮದೀನದಿಂದ ಬಂದವರಲ್ಲ’ ಎಂದು ಸಂಸದ ಪ್ರತಾಪ ಸಿಂಹ ತಿರುಗೇಟು ನೀಡಿದರು.

‘ಹೊರಗೆ ಹೋಗಿ ಎನ್ನಲು ಈ ದೇಶ ಇವರ ತಾತನದ್ದಾ’ ಎಂಬ ತನ್ವೀರ್‌ ಹೇಳಿಕೆಗೆ ಮೈಸೂರಿನಲ್ಲಿ ಭಾನುವಾರ ಪ್ರತಿಕ್ರಿಯಿಸಿ, ‘ಅವರ ಪೂರ್ವಜರು ಇಲ್ಲೇ ಹುಟ್ಟಿ ಬೆಳೆದು ಮತಾಂತಗೊಂಡವರು. ಆದ ಕಾರಣ ಇಂದು ತನ್ವೀರ್‌ ಸೇಠ್‌ ಆಗಿದ್ದಾರೆ. ಅಷ್ಟೇ ವ್ಯತ್ಯಾಸ. ಅವರ ತಾತ ಹಿಂದೂ ಆಗಿದ್ದರು ಎಂಬ ಸತ್ಯವನ್ನು ಅರಿತುಕೊಂಡು ಮಾತನಾಡಲಿ’ ಎಂದರು.

‘ಮುಸ್ಲಿಮರು ಮತ್ತು ಕ್ರೈಸ್ತರನ್ನು ಬೆತ್ಲೆಹೆಮ್, ಜೆರುಸಲೆಂ, ರೋಂ, ಮಕ್ಕಾ ಅಥವಾ ಮದೀನದಿಂದ ಭಾರತಕ್ಕೆ ತಂದು ಹಾಕಿಲ್ಲ. ಇವರ ಪೂರ್ವಜರು ಹಿಂದೂಗಳೇ ಆಗಿದ್ದರು ಎಂಬ ಸಂಗತಿಯನ್ನು ಒಪ್ಪಿಕೊಳ್ಳಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT