<p><strong>ಮೈಸೂರು:</strong> ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳಬಾರದು. ತಮ್ಮ ಬೌಂಡರಿಯನ್ನು ರಾಜ್ಯಕ್ಕೆ ಸೀಮಿತಗೊಳಿಸಿಕೊಳ್ಳುವುದು ಉತ್ತಮ’ ಎಂದು ಸಂಸದ ಪ್ರತಾಪಸಿಂಹ ಗುರುವಾರ ಇಲ್ಲಿ ವ್ಯಂಗ್ಯವಾಡಿದರು.</p>.<p>‘ಅವರನ್ನು ಪ್ರಶ್ನಿಸಿದ ಕೂಡಲೇ ಪ್ರಧಾನಿಯಿಂದ ಲೆಕ್ಕ ಕೇಳುತ್ತಾರೆ. ನಮ್ಮನ್ನು ಕೇಳಿದರೆ ನಾವೇ ಕೊಡುತ್ತೇವೆ. ಲೆಕ್ಕಪತ್ರ ತಪಾಸಣೆಗಾಗಿ ಸ್ವತಃ ಮುಖ್ಯಮಂತ್ರಿಯೇ ನೀಡಿರುವ ಆಹ್ವಾನ ಸ್ವೀಕರಿಸುವುದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ’ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರು ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ಭಾಷಣವನ್ನು ಸಿದ್ದರಾಮಯ್ಯ ಲಕ್ಷ್ಯಗೊಟ್ಟು ಕೇಳಿ, ಅದಕ್ಕೆ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವುದು ಖುಷಿ ತಂದಿದೆ. ಸಂತೋಷ್ ಅವರ ಭಾಷಣವನ್ನು ಅವರು ಅಷ್ಟು ಗಮನವಿಟ್ಟು ಕೇಳಿದ್ದಕ್ಕೆ ಧನ್ಯವಾದ’ ಎಂದರು.</p>.<p>‘ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಅವರು, ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಅಂತಹ ಕೆಲಸ ಕರ್ನಾಟಕದಲ್ಲೂ ಆಗಬೇಕಿತ್ತು ಎಂದು ಸಿದ್ದರಾಮಯ್ಯ ಮೇಲೆ ನಿರೀಕ್ಷೆಗಳನ್ನು ಇಟ್ಟುಕೊಂಡು ಸಂತೋಷ್ ಹೇಳಿದ್ದಾರೆಯಷ್ಟೆ’ ಎಂದು ತಿಳಿಸಿದರು.</p>.<p>‘ಸಿದ್ದರಾಮಯ್ಯ ಈ ರಾಜ್ಯ ಆಳಿದವರು. ಅವರಷ್ಟೇ ಅಲ್ಲ; ವಿರೋಧ ಪಕ್ಷದ ಎಲ್ಲ ಹಿರಿಯರನ್ನು ಗೌರವದಿಂದ ಕಾಣುತ್ತೇನೆ. ಕಾಲು ಮುಟ್ಟಿ ನಮಸ್ಕರಿಸಿತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಪ್ರಧಾನಿ ಮಟ್ಟಕ್ಕೆ ಏರಿಸಿಕೊಳ್ಳಬಾರದು. ತಮ್ಮ ಬೌಂಡರಿಯನ್ನು ರಾಜ್ಯಕ್ಕೆ ಸೀಮಿತಗೊಳಿಸಿಕೊಳ್ಳುವುದು ಉತ್ತಮ’ ಎಂದು ಸಂಸದ ಪ್ರತಾಪಸಿಂಹ ಗುರುವಾರ ಇಲ್ಲಿ ವ್ಯಂಗ್ಯವಾಡಿದರು.</p>.<p>‘ಅವರನ್ನು ಪ್ರಶ್ನಿಸಿದ ಕೂಡಲೇ ಪ್ರಧಾನಿಯಿಂದ ಲೆಕ್ಕ ಕೇಳುತ್ತಾರೆ. ನಮ್ಮನ್ನು ಕೇಳಿದರೆ ನಾವೇ ಕೊಡುತ್ತೇವೆ. ಲೆಕ್ಕಪತ್ರ ತಪಾಸಣೆಗಾಗಿ ಸ್ವತಃ ಮುಖ್ಯಮಂತ್ರಿಯೇ ನೀಡಿರುವ ಆಹ್ವಾನ ಸ್ವೀಕರಿಸುವುದನ್ನು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ’ ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಅವರು ಪಕ್ಷದ ಕಾರ್ಯಕ್ರಮದಲ್ಲಿ ಮಾಡಿದ ಭಾಷಣವನ್ನು ಸಿದ್ದರಾಮಯ್ಯ ಲಕ್ಷ್ಯಗೊಟ್ಟು ಕೇಳಿ, ಅದಕ್ಕೆ ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವುದು ಖುಷಿ ತಂದಿದೆ. ಸಂತೋಷ್ ಅವರ ಭಾಷಣವನ್ನು ಅವರು ಅಷ್ಟು ಗಮನವಿಟ್ಟು ಕೇಳಿದ್ದಕ್ಕೆ ಧನ್ಯವಾದ’ ಎಂದರು.</p>.<p>‘ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್ ಅವರು, ಕೋವಿಡ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಅಂತಹ ಕೆಲಸ ಕರ್ನಾಟಕದಲ್ಲೂ ಆಗಬೇಕಿತ್ತು ಎಂದು ಸಿದ್ದರಾಮಯ್ಯ ಮೇಲೆ ನಿರೀಕ್ಷೆಗಳನ್ನು ಇಟ್ಟುಕೊಂಡು ಸಂತೋಷ್ ಹೇಳಿದ್ದಾರೆಯಷ್ಟೆ’ ಎಂದು ತಿಳಿಸಿದರು.</p>.<p>‘ಸಿದ್ದರಾಮಯ್ಯ ಈ ರಾಜ್ಯ ಆಳಿದವರು. ಅವರಷ್ಟೇ ಅಲ್ಲ; ವಿರೋಧ ಪಕ್ಷದ ಎಲ್ಲ ಹಿರಿಯರನ್ನು ಗೌರವದಿಂದ ಕಾಣುತ್ತೇನೆ. ಕಾಲು ಮುಟ್ಟಿ ನಮಸ್ಕರಿಸಿತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>