<p><strong>ಮೈಸೂರು: </strong>ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೆ.6ರಿಂದ ಭೌತಿಕ ತರಗತಿ ನಡೆಸಲು ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದ್ದು, ಮಕ್ಕಳಿಗೆ ಮಾಹಿತಿ ರವಾನಿಸುವ ಕಾರ್ಯದಲ್ಲಿ ತೊಡಗಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 1.33 ಲಕ್ಷ ವಿದ್ಯಾರ್ಥಿಗಳಿದ್ದು, ಕೋವಿಡ್ ಮಾರ್ಗಸೂಚಿ ಅನ್ವಯ ತರಗತಿ ನಡೆಸಲು ಶಿಕ್ಷಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.</p>.<p>ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು. ಆನ್ಲೈನ್ ಹಾಗೂ ಆಫ್ಲೈನ್ ಎರಡಕ್ಕೂ ಅವಕಾಶವಿದ್ದು, ಹಾಜರಾತಿ ಕಡ್ಡಾಯ ಮಾಡಿಲ್ಲ. ಶಿಕ್ಷಕರು ಲಸಿಕೆ ಪಡೆದಿರಬೇಕು.</p>.<p>ಕೇರಳ ರಾಜ್ಯ ಗಡಿ ಭಾಗದಲ್ಲಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ತರಗತಿ ಆರಂಭಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಗುರುವಾರ ಜಿಲ್ಲಾಧಿಕಾರಿ ಜೊತೆಗಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಂದ ಸೇರಿ ಒಟ್ಟು 12,931 ಶಿಕ್ಷಕರು ಇದ್ದಾರೆ. ಇವರಲ್ಲಿ ಬಹುತೇಕರು ಈಗಾಗಲೇ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿ ಆನ್ಲೈನ್ ಬೋಧನೆಯಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೆ.6ರಿಂದ ಭೌತಿಕ ತರಗತಿ ನಡೆಸಲು ಜಿಲ್ಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಸಿದ್ಧತೆ ನಡೆಸಿದ್ದು, ಮಕ್ಕಳಿಗೆ ಮಾಹಿತಿ ರವಾನಿಸುವ ಕಾರ್ಯದಲ್ಲಿ ತೊಡಗಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 1.33 ಲಕ್ಷ ವಿದ್ಯಾರ್ಥಿಗಳಿದ್ದು, ಕೋವಿಡ್ ಮಾರ್ಗಸೂಚಿ ಅನ್ವಯ ತರಗತಿ ನಡೆಸಲು ಶಿಕ್ಷಕರಿಗೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.</p>.<p>ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯ. ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ತರಬೇಕು. ಆನ್ಲೈನ್ ಹಾಗೂ ಆಫ್ಲೈನ್ ಎರಡಕ್ಕೂ ಅವಕಾಶವಿದ್ದು, ಹಾಜರಾತಿ ಕಡ್ಡಾಯ ಮಾಡಿಲ್ಲ. ಶಿಕ್ಷಕರು ಲಸಿಕೆ ಪಡೆದಿರಬೇಕು.</p>.<p>ಕೇರಳ ರಾಜ್ಯ ಗಡಿ ಭಾಗದಲ್ಲಿರುವ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ತರಗತಿ ಆರಂಭಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ಗುರುವಾರ ಜಿಲ್ಲಾಧಿಕಾರಿ ಜೊತೆಗಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಡಿಡಿಪಿಐ ರಾಮಚಂದ್ರರಾಜೇ ಅರಸ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳಿಂದ ಸೇರಿ ಒಟ್ಟು 12,931 ಶಿಕ್ಷಕರು ಇದ್ದಾರೆ. ಇವರಲ್ಲಿ ಬಹುತೇಕರು ಈಗಾಗಲೇ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಿ ಆನ್ಲೈನ್ ಬೋಧನೆಯಲ್ಲಿ ತೊಡಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>