ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಧಿಕೃತ ಆಮಂತ್ರಣ

Last Updated 22 ಸೆಪ್ಟೆಂಬರ್ 2022, 13:01 IST
ಅಕ್ಷರ ಗಾತ್ರ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನವದೆಹಲಿಯಲ್ಲಿ ಸರ್ಕಾರದಿಂದ ಗುರುವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೇಯರ್ ಶಿವಕುಮಾರ್, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಹಾಗೂ ಚಿಕ್ಕೋಡಿ ಕ್ಷೇತ್ರದ ಸಂಸದ ಅಣ್ಣಾಸಾಹೇಬ ಜೊಲ್ಲೆ ಇದ್ದರು.

ಸೆ.26ರಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಮೈಸೂರು ದಸರೆಗೆ ಚಾಲನೆ ದೊರೆಯಲಿದೆ. ನಾಡಹಬ್ಬದ ಉದ್ಘಾಟನೆಗೆ ದೇಶದ ಪ್ರಥಮ ಪ್ರಜೆ ಆಗಮಿಸುತ್ತಿರುವುದು ಇದೇ‌ ಮೊದಲನೇ ಬಾರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT