ಪುತ್ತೂರಿನವರಾದ ಇವರು 1993ರಲ್ಲಿ ಕಾನ್ಸ್ಟೆಬಲ್ ಆಗಿ ಪೊಲೀಸ್ ಇಲಾಖೆಯನ್ನು ಪ್ರವೇಶಿಸಿದರು. ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯನಿರ್ವಹಿಸಿದ ನಂತರ 2002ರಲ್ಲಿ ನೇಮಕಾತಿ ಪರೀಕ್ಷೆ ಬರೆದು ಸಬ್ಇನ್ಸ್ಪೆಕ್ಟರ್ ಆಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿದರು. ಮರುವರ್ಷವೇ ಕಾಡುಗಳ್ಳ ವೀರಪ್ಪನ್ ವಿರುದ್ಧದ ಕಾರ್ಯಾಚರಣೆ ಎಸ್ಟಿಎಫ್ ಪಡೆ ಸೇರಿ, ವೀರಪ್ಪನ್ ಹತ್ಯೆಯವರೆಗೂ ಅದೇ ತಂಡದಲ್ಲಿ ಮುಂದುವರಿದಿದ್ದರು.