ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ‘ಅ. 2ರಂದು ಬೆಳಿಗ್ಗೆ 10 ಗಂಟೆಗೆ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸರ್ವಧರ್ಮ ಪ್ರಾರ್ಥನೆ ಮಾಡಿ, ಸುಬ್ಬರಾಯರ ಕೆರೆಯ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದವರೆಗೆ ಜಾಥಾ ಹೊರಡಲಾಗುವುದು. ಉದ್ಯಾನದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಲಾಗುವುದು’ ಎಂದು ಮಾಹಿತಿ ನೀಡಿದರು.