‘ಜೂನ್ 3ರಂದು ಬೆಳಿಗ್ಗೆ 10.30ಕ್ಕೆ ಶಾಸಕ ಜಿ.ಟಿ. ದೇವೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಲ್. ನಾಗೇಂದ್ರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ಗೌಡ, ಮುಖಂಡರಾದ ವಾಸು, ಭಾಗ್ಯ ಮಹದೇಶ್, ಎಸ್ಬಿಎಂ ಮಂಜು ಭಾಗವಹಿಸಲಿದ್ದಾರೆ. ಪ್ರತಿದಿನ ಬೆಳಿಗ್ಗೆ 8ರಿಂದ 11 ಹಾಗೂ ಸಂಜೆ 4ರಿಂದ ರಾತ್ರಿ 9.30ರವರೆಗೆ ಪಂದ್ಯಗಳು ನಡೆಯಲಿವೆ. 5ರಂದು ಸಂಜೆ 5ಕ್ಕೆ ಸೆಮಿ ಫೈನಲ್, ಫೈನಲ್ ಪಂದ್ಯಗಳು ನಡೆಯಲಿವೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.