<p><strong>ಮೈಸೂರು</strong>: ‘ನಮ್ಮ ವೋಟುಗಳು ಬೇಕು. ಆದರೆ ನಮ್ಮ ಸಂಸ್ಕೃತಿ ಬೇಡವಾ?’ ಎಂದು ಪ್ರೊ.ಮಹೇಶ್ ಚಂದ್ರಗುರು ಸೋಮವಾರ ಇಲ್ಲಿ ಕಿಡಿಕಾರಿದರು.</p>.<p>‘ನಾಡಹಬ್ಬ ದಸರಾಗೆ ನಮ್ಮ ವಿರೋಧವಿಲ್ಲ. ನಾವು ಭಾಗಿಯಾಗುತ್ತೇವೆ. ಆದರೆ, ಬಹುತ್ವದ ಪ್ರತೀಕವಾಗಿರುವ ಮಹಿಷ ದಸರಾಗೆ ಜಿಲ್ಲಾಡಳಿತ ಅನುಮತಿ ನೀಡದಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಹಿಷ ದಸರಾ ಆಚರಿಸಲು ಅನುಮತಿ ನೀಡದ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮರ್ಥರು. ತಮ್ಮ ಹುದ್ದೆಗಳಲ್ಲಿ ಮುಂದುವರೆಯಲು ಅನರ್ಹರು. ಅವರ ಸಂಸ್ಕೃತಿಗೆ ಅವರು ಜಿಂದಾಬಾದ್ ಹೇಳಿಕೊಳ್ಳಲಿ. ನಮ್ಮ ಸಂಸ್ಕೃತಿಗೆ ನಾವು ಜಿಂದಾಬಾದ್ ಹೇಳಿಕೊಳ್ಳುತ್ತೇವೆ’ ಎಂದರು.</p>.<p>‘ಕಾಂಗ್ರೆಸ್, ಜೆಡಿಎಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಹಿಷ ದಸರಾಗೆ ಯಾವುದೇ ಅಡ್ಡಿಯಿರಲಿಲ್ಲ. ಒಬ್ಬ ಸಂಸದನಿಗಾಗಿ ಬಿಜೆಪಿ ಸರ್ಕಾರ ಅಡ್ಡಿಪಡಿಸುತ್ತಿದೆ. ಸಂವಿಧಾನ ಪಾಲಿಸಬೇಕಾದ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಗುಲಾಮಗಿರಿ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣೆಗೆ ಅನುಮತಿ ಕೊಟ್ಟಿಲ್ಲ’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಕಿಡಿಕಾರಿದರು.</p>.<p>‘ನಾವೇನು ದೇಶದ್ರೋಹದ ಕೆಲಸ ಮಾಡುತ್ತಿಲ್ಲ. ಮಹಿಷ ರಾಕ್ಷನಲ್ಲ, ರಕ್ಷಕ. ಮಹಿಷ ದಸರಾ ತಡೆಯೋ ಶಕ್ತಿ ಯಾರಿಗೂ ಇಲ್ಲ. ಆಚರಣೆಗೆ ಯಾವ ದೊಣ್ಣೆನಾಯಕನ ಅಪ್ಪಣೆಯೂ ಬೇಕಿಲ್ಲ. ನಮ್ಮ ಆಚಾರ–ವಿಚಾರ, ಸಂಸ್ಕೃತಿಗೆ ಧಕ್ಕೆ ತರಲು ಮುಂದಾದರೆ ಹೈಕೋರ್ಟ್, ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗುತ್ತದೆ’ ಎಂದು ಮಾಜಿ ಮೇಯರ್ ಹೇಳಿದರು.</p>.<p>ಸೋಮಯ್ಯ ಮಲೆಯೂರು, ಸಿದ್ದಸ್ವಾಮಿ, ವಿಷ್ಣು ಪತ್ರಿಕಾಗೋಷ್ಠಿಯಲ್ಲಿದ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/district/mysore/mahisha-dasara-in-mysuru-on-actober-5th-but-mcc-not-permission-given-872514.html" target="_blank">ಅನುಮತಿ ಇಲ್ಲದಿದ್ದರೂ ಮೈಸೂರಿನಲ್ಲಿ ನಾಳೆ ನಡೆಯಲಿದೆ ‘ಮಹಿಷ ದಸರಾ’</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ನಮ್ಮ ವೋಟುಗಳು ಬೇಕು. ಆದರೆ ನಮ್ಮ ಸಂಸ್ಕೃತಿ ಬೇಡವಾ?’ ಎಂದು ಪ್ರೊ.ಮಹೇಶ್ ಚಂದ್ರಗುರು ಸೋಮವಾರ ಇಲ್ಲಿ ಕಿಡಿಕಾರಿದರು.</p>.<p>‘ನಾಡಹಬ್ಬ ದಸರಾಗೆ ನಮ್ಮ ವಿರೋಧವಿಲ್ಲ. ನಾವು ಭಾಗಿಯಾಗುತ್ತೇವೆ. ಆದರೆ, ಬಹುತ್ವದ ಪ್ರತೀಕವಾಗಿರುವ ಮಹಿಷ ದಸರಾಗೆ ಜಿಲ್ಲಾಡಳಿತ ಅನುಮತಿ ನೀಡದಿರುವುದು ಒಳ್ಳೆಯ ಬೆಳವಣಿಗೆಯಲ್ಲ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಹಿಷ ದಸರಾ ಆಚರಿಸಲು ಅನುಮತಿ ನೀಡದ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮರ್ಥರು. ತಮ್ಮ ಹುದ್ದೆಗಳಲ್ಲಿ ಮುಂದುವರೆಯಲು ಅನರ್ಹರು. ಅವರ ಸಂಸ್ಕೃತಿಗೆ ಅವರು ಜಿಂದಾಬಾದ್ ಹೇಳಿಕೊಳ್ಳಲಿ. ನಮ್ಮ ಸಂಸ್ಕೃತಿಗೆ ನಾವು ಜಿಂದಾಬಾದ್ ಹೇಳಿಕೊಳ್ಳುತ್ತೇವೆ’ ಎಂದರು.</p>.<p>‘ಕಾಂಗ್ರೆಸ್, ಜೆಡಿಎಸ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಹಿಷ ದಸರಾಗೆ ಯಾವುದೇ ಅಡ್ಡಿಯಿರಲಿಲ್ಲ. ಒಬ್ಬ ಸಂಸದನಿಗಾಗಿ ಬಿಜೆಪಿ ಸರ್ಕಾರ ಅಡ್ಡಿಪಡಿಸುತ್ತಿದೆ. ಸಂವಿಧಾನ ಪಾಲಿಸಬೇಕಾದ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಗುಲಾಮಗಿರಿ ಮಾಡುತ್ತಿದ್ದಾರೆ. ಮಹಿಷ ದಸರಾ ಆಚರಣೆಗೆ ಅನುಮತಿ ಕೊಟ್ಟಿಲ್ಲ’ ಎಂದು ಮಾಜಿ ಮೇಯರ್ ಪುರುಷೋತ್ತಮ್ ಕಿಡಿಕಾರಿದರು.</p>.<p>‘ನಾವೇನು ದೇಶದ್ರೋಹದ ಕೆಲಸ ಮಾಡುತ್ತಿಲ್ಲ. ಮಹಿಷ ರಾಕ್ಷನಲ್ಲ, ರಕ್ಷಕ. ಮಹಿಷ ದಸರಾ ತಡೆಯೋ ಶಕ್ತಿ ಯಾರಿಗೂ ಇಲ್ಲ. ಆಚರಣೆಗೆ ಯಾವ ದೊಣ್ಣೆನಾಯಕನ ಅಪ್ಪಣೆಯೂ ಬೇಕಿಲ್ಲ. ನಮ್ಮ ಆಚಾರ–ವಿಚಾರ, ಸಂಸ್ಕೃತಿಗೆ ಧಕ್ಕೆ ತರಲು ಮುಂದಾದರೆ ಹೈಕೋರ್ಟ್, ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಗುತ್ತದೆ’ ಎಂದು ಮಾಜಿ ಮೇಯರ್ ಹೇಳಿದರು.</p>.<p>ಸೋಮಯ್ಯ ಮಲೆಯೂರು, ಸಿದ್ದಸ್ವಾಮಿ, ವಿಷ್ಣು ಪತ್ರಿಕಾಗೋಷ್ಠಿಯಲ್ಲಿದ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/district/mysore/mahisha-dasara-in-mysuru-on-actober-5th-but-mcc-not-permission-given-872514.html" target="_blank">ಅನುಮತಿ ಇಲ್ಲದಿದ್ದರೂ ಮೈಸೂರಿನಲ್ಲಿ ನಾಳೆ ನಡೆಯಲಿದೆ ‘ಮಹಿಷ ದಸರಾ’</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>